ಸ್ಯಾಂಡಲ್ ವುಡ್ ನಟಿ ಶ್ರುತಿ ಕಾರ್​ಡ್ರೈವರ್ ನೇಣಿಗೆ ಶರಣು!!

ಬೆಂಗಳೂರು: 

      ಸ್ಯಾಂಡಲ್​​ವುಡ್​ನ ಹಿರಿಯ ನಟಿ‌ ಶ್ರುತಿ ಅವರ ಕಾರ್ ಡ್ರೈವರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋನಹಳ್ಳಿ ಗ್ರಾಮದ ಬಳಿ ನಡೆದಿದೆ.

       ಮಂಜುನಾಥ್ ಸಿಂಗ್(25) ಮೃತ ಕಾರು ಚಾಲಕ. ಈತ ಮಾಗಡಿ ರಸ್ತೆ ಫಾರೆಸ್ಟ್ ಗೇಟ್ ಬಳಿ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಕಡಬಗೆರೆಯಲ್ಲಿ ನಡೆದಿದ್ದ ಪಾರ್ಟಿಗೆ ಹೋಗಿದ್ದನೆನ್ನಲಾಗಿದ್ದು ಆ ನಂತರ ಟವೆಲ್ ನಿಂದ ಕತ್ತಿಗೆ ಸುತ್ತಿಕೊಂಡು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

       ಮೂಲತಃ ಚಿಕ್ಕಮಗಳೂರಿನ ಬೆಳವಾಡಿಯವರಾದ ಮಂಜುನಾಥ್ ಕೆಲವು ವರ್ಷಗಳಿಂದ ನಟಿ ಶೃತಿ ಮತ್ತು ಶರಣ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸುಮಾರು ಹದಿನೈದು ವರ್ಷಗಳಿಂದ ಮಾಚೋಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದೆ.

       ಇನ್ನು ಮಂಜುನಾಥ್ ಸಾವಿನ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದು, ಮೃತನ ಸಾವಿನ ಕುರಿತು ಹಲವು ಅನುಮಾನಗಳಿದ್ದು ಸೂಕ್ತ ತನಿಖೆಯಾಗಬೇಕೆಂದು ಮೃತನ ಕುಟುಂಬ ಆಗ್ರಹಿಸಿದೆ.

      ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap