‘ಸರ್ಕಾರ ಪತನಕ್ಕೆ ಕಾರಣ ತಿಳಿಸುವೆ’- ಸತೀಶ್ ಜಾರಕಿಹೊಳಿ

ಬೆಳಗಾವಿ:

      ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ ಸಂಗತಿಯನ್ನು ಕೆಲವೇ ದಿನಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಮಾಜಿ ಸಚಿವ, ಶಾಸಕ ಸತೀಶ ಜಾರಕಿಹೊಳಿ‌ ಹೇಳಿದ್ದಾರೆ.

      ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಜಾರಕಿಹೊಳಿ ಕುಟುಂಬದ ಬಗ್ಗೆ ತಪ್ಪು ಸಂದೇಶ ಹೋಗಬಾರದು. ಇತಿಹಾಸದಲ್ಲಿ ಜಾರಕಿಹೊಳಿ‌ ಕುಟುಂಬಕ್ಕೆ ಕೆಟ್ಟ ಹೆಸರು ಬರಬಾರದು. ಅದು ಇತಿಹಾಸದಲ್ಲಿ ಉಳಿದು ಹೋಗುತ್ತದೆ. ಹೀಗಾಗಿ ಕೆಲವೇ ದಿನಗಳಲ್ಲಿ ಬಹಿರಂಗ ಮಾಡ್ತೀನಿ ಎಂದರು.

      ರಮೇಶ ಜಾರಕಿಹೊಳಿ ಸೇರಿದಂತೆ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದು ಸ್ವಾಗತಾರ್ಹ ಎಂದ ಅವರು, ಅನರ್ಹತೆ ಪ್ರಕರಣ ಇತ್ಯರ್ಥಕ್ಕೆ 1 ವರ್ಷ ಬೇಕು. ನಮ್ಮ ಪರ ತೀರ್ಪು ಬಂದ್ರೆ ಅವರು ಕೋರ್ಟ್‌ಗೆ ಹೋಗುತ್ತಾರೆ. ಅವರ ಪರ ತೀರ್ಪು ಬಂದ್ರೆ ನಾವು‌ ಕೋರ್ಟ್​​ಗೆ ಹೋಗುತ್ತೇವೆ ಎಂದಿದ್ದಾರೆ.

      ಬಿಜೆಪಿ ತಮ್ಮ ಆಡಳಿತದ ಚುಕ್ಕಾಣೆ ಹಿಡಿಯಲು ಇನ್ನು ಶಾಸಕರ ಬೆಂಬಲ ಬೇಕು. ಬೆಂಬಲ ದೊರಯುತ್ತೆ ಅನ್ನೋದು ಬಹುತೇಕ ಖಚಿತವಿಲ್ಲ. ಇದನ್ನು ಬಿಜೆಪಿ ಹೈ ಕಮಾಂಡ್ ಕೂಡ ತಿಳಿಸಿದೆ. ರಾಜ್ಯಪಾಲರು ಎಲ್ಲವನ್ನು ನಿರ್ಣಯಿಸುತ್ತಾರೆ ಎಂದು ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap