ಲಾಕ್ ಡೌನ್ ವೇಳೆ ಶುಲ್ಕ ವಸೂಲಿ ಮಾಡುವ ಶಾಲೆಯ ಮಾನ್ಯತೆ ರದ್ದು!!

ಬೆಂಗಳೂರು :

      ರಾಜ್ಯದ ಶಾಲೆಗಳಲ್ಲಿ ಯಾವುದೇ ಶುಲ್ಕವನ್ನು ವಸೂಲಿ ಮಾಡುವಂತಿಲ್ಲ. ಈ ಆದೇಶವನ್ನು ಉಲ್ಲಂಘಿಸಿ, ವಸೂಲಿ ಮಾಡಿದಲ್ಲಿ ಶಾಲೆಯ ಮಾನ್ಯತೆಯನ್ನೇ ರದ್ದುಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

     ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯದ ವಿದ್ಯಾರ್ಥಿಗಳ 2020-21ನೇ ಸಾಲಿನ ಪ್ರವೇಶಾತಿಯನ್ನು ಇದೀಗ ಮುಂದೂಡಿಕೆ ಮಾಡಲಾಗಿದೆ. ರಾಜ್ಯದ ವಿವಿಧೆಡೆ 2020-21ನೇ ಸಾಲಿನ ಪ್ರವೇಶಾತಿಯನ್ನು ಅನೇಕ ಶಾಲೆಗಳು ಲಾಕ್ ಡೌನ್ ಇದ್ದರೂ ಆರಂಭಿಸಲಾಗಿದೆ. ಜೊತೆಗೆ ಶಾಲಾ ಶುಲ್ಕವನ್ನು ವಸೂಲಿಗೆ ಇಳಿಯಲಾಗಿದೆ. ಆದರೆ 2020-21ನೇ ಸಾಲಿನ ಶಾಲಾ ದಾಖಲಾತಿಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ.   ಶಾಲಾ ಶುಲ್ಕ ವಸೂಲಿಯನ್ನು ಮಾಡದಂತೆ ಆದೇಶ ನೀಡಲಾಗಿದೆ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಎಚ್ಚರಿಕೆಯನ್ನು ದಿಕ್ಕರಿಸಿ ನಡೆದ ಶಾಲೆಗಳ ಮಾನ್ಯತೆಯನ್ನೇ ರದ್ದು ಮಾಡಲಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದರು.

     ಇನ್ನು ರಾಜ್ಯದ ಶಾಲಾ ಶಿಕ್ಷಕರ ರಜೆಯನ್ನು ಏಪ್ರಿಲ್ 11ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap