‘ಸಿದ್ದು-ದಿನೇಶ್ ಸುಮ್ಮನೆ ರಾಜೀನಾಮೆ ಕೊಟ್ಟಿದ್ದಾರೆ’ – ಶ್ಯಾಮನೂರು ವ್ಯಂಗ್ಯ!!

ದಾವಣಗೆರೆ :

     ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಸುಮ್ಮನೆ ರಾಜೀನಾಮೆ ಕೊಟ್ಟಿದ್ದಾರೆ, ಆಮೇಲೆ ವಾಪಸ್ ಪಡೆಯುತ್ತಾರೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ವ್ಯಂಗ್ಯವಾಡಿದ್ದಾರೆ.

     ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರುವ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಸುಮ್ಮನೆ ರಾಜೀನಾಮೆ ಕೊಟ್ಟಿದ್ದಾರೆ. ಮತ್ತೆ ಜುಲುಮಿ ಮಾಡಿ ವಾಪಸ್ ಕೊಡಲಿ ಎಂಬ ಲೆಕ್ಕಚಾರ ಅವರದ್ದು, ಈ ಬಗ್ಗೆ ಸೋನಿಯಾ ಗಾಂಧಿ ನೋಡಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

      ‘ಚುನಾವಣೆಯಲ್ಲಿ ಸೋತ ಸಂದರ್ಭದಲ್ಲಿ ರಾಜೀನಾಮೆ ಕೊಡುತ್ತಾರೆ. ಆಮೇಲೆ ವಾಪಸ್ ಪಡಿತಾರೆ. ಸೋತಾಗ ಇದೆಲ್ಲ ಮಾಮೂಲಿ. ಆ ವಿಚಾರ ನಮಗೇಕೆ?’ ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap