ಕುಮಾರಸ್ವಾಮಿಗೆ ಮೀಟೂ ವಾರ್ನಿಂಗ್!!!

ಶಿವಮೊಗ್ಗ 

      ಮುಂದೆ ಮೀ ಟೂ ಅಭಿಯಾನದಲ್ಲಿ ನಿಮ್ಮ ಹೆಸರು ಪ್ರಸ್ತಾಪವಾಗಬಹುದು ಎಂದು ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಅವರು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

       ಸಿಎಂ ಕುಮಾರಸ್ವಾಮಿ ಅವರು ಸೊರಬಕ್ಕೆ ಬಂದಾಗ ನನ್ನನ್ನೇ ಟಾರ್ಗೆಟ್ ಮಾಡಿ ಮಾತನಾಡಿದ್ದಾರೆ. ನನ್ನ ಬಗ್ಗೆ ಮಾತನಾಡಿದರೆ ನಿಮ್ಮ ಬಗ್ಗೆ ಸಾಕ್ಷಿ ಸಮೇತ ನಾನು ಮಾತನಾಡುತ್ತೇನೆ. ಇನ್ನೂ ಹೆಚ್ಚು ಮಾತನಾಡಿದರೆ ಮೀ ಟೂದಲ್ಲಿ ನಿಮ್ಮ ಹೆಸರು ಪ್ರಸ್ತಾಪವಾಗಬಹುದು ಎಂದು ಎಚ್ಚರಿಕೆ ನೀಡಿದರು.

      ಹುಟ್ಟುಹಬ್ಬ ಆಚರಣೆ ಮಾಡಿರುವುದು, ಮತ್ತೊಂದು ಮಾಡಿರುವುದು, ತಲೆಮರೆಸಿಕೊಂಡಿರುವುದು ಸಾಕಷ್ಟು ಲಿಂಕ್​ಗಳು ಸಿಎಂ ಕುಮಾರಸ್ವಾಮಿ ಕುರಿತಾದ ಬೇಕಾದಷ್ಟು ಸಾಕ್ಷಿಗಳು ಸಾಮಾಜಿಕ ಜಾಲತಾಣದಲ್ಲಿ ಲಿಂಕ್​ ಆಗಿವೆ. ಇನ್ನೊಬ್ಬರ ಜತೆ ಸಂಬಂಧ ಹೊಂದಬಹುದೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ​ ಎಂದು ರಾಧಿಕಾ ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸಿ ಮಾತನಾಡಿದರು.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap