ಪುತ್ತೂರು:
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿಘಾಟ್ನ ರಸ್ತೆಯನ್ನು ಅಕ್ಟೋಬರ್ 3 ರಿಂದ ಬಸ್ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಧಿಲ್ ಅವರು ತಿಳಿಸಿದ್ದಾರೆ.
ಒಟ್ಟು 12 ಕಡೆ ಭೂಕುಸಿತ ಉಂಟಾಗಿತ್ತು. ಈ ಪೈಕಿ 8 ಕಡೆಗಳಲ್ಲಿ ಸದ್ಯಕ್ಕೆ ಅಪಾಯವಿಲ್ಲ. 4 ಕಡೆಗಳಲ್ಲಿ ಅಪಾಯವಿದ್ದು, ಅಂತಹ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪುತ್ತೂರು ತಾಲ್ಲೂಕಿನ ಗುಂಡ್ಯ ಮತ್ತು ಸಕಲೇಶ್ವರ ನಡುವಿನ ಶಿರಾಢಿಘಾಟ್ನ ರಸ್ತೆಯು ಹಾಳಾಗಿದ್ದು, ಈಗ ಆ ರಸ್ತೆಗೆ ಕಾಂಕ್ರಿಟ್ ಹಾಕಲಾಗಿದ್ದು, ಸಂಚಾರಕ್ಕೆ ಯೋಗ್ಯವಾಗಿದ್ದು, ಲಾರಿ ಸೇರಿದಂತೆ ಬಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿಲ್ಲ, ಬಸ್ಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/shiradi-ghatt-road.jpg)