ಬೀದರ್:
ಕೂಡಲ ಸಂಗಮದಲ್ಲಿರುವ ಬಸವಣ್ಣನ ಐಕ್ಯ ಮಂಟಪದ ಐಕ್ಯಸ್ಥಳದಲ್ಲಿನ ಲಿಂಗದಲ್ಲಿ ಬಿರುಕು ಕಾಣಿಸಿಕೊಂಡಿರುವುದು ಭಕ್ತರರನ್ನು ಆತಂಕಗೊಳಿಸಿದೆ.
ಕೃಷ್ಣಾ ಹಾಗೂ ಮಲಪ್ರಭಾ ನದಿಗಳ ಸಂಗಮದಲ್ಲಿ ಬಸವಣ್ಣನ ಐಕ್ಯ ಮಂಟಪವಿದೆ. ಐಕ್ಯಸ್ಥಳದ ವೀಕ್ಷಣೆಗೆ ನಿತ್ಯ ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ಆಗಮಿಸುವ ಜನರು ಶಿವಲಿಂಗದ ಮೇಲೆ ನಾಣ್ಯಗಳನ್ನು ಎಸೆಯುತ್ತಾರೆ. ಆದ್ದರಿಂದ, ಬಿರುಕು ಉಂಟಾಗಿರಬಹುದು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ಕಾಣಿಕೆಯನ್ನು ಹುಂಡಿಯಲ್ಲಿ ಹಾಕಿ, ನಾಣ್ಯವನ್ನು ಎಸೆಯಬಾರದು ಎಂದು ಫಲಕವನ್ನು ಅಳವಡಿಸಿದೆ. ಆದರೆ, ಕೆಲವು ಭಕ್ತರು ನಾಣ್ಯವನ್ನು ಲಿಂಗದ ಮೇಲೆ ಎಸೆಯುವುದು ಇನ್ನೂ ಕಡಿಮೆಯಾಗಿಲ್ಲ.
ಬಸವಣ್ಣನ ಐಕ್ಯಸ್ಥಳದ ಶಿವಲಿಂಗದ ಸಂರಕ್ಷಣೆಗೆ ಬಸವ ಅಭಿಮಾನಿಗಳು ಆಗ್ರಹಿಸುತ್ತಿದ್ದು, ಐಕ್ಯಸ್ಥಳದ ಶಿವಲಿಂಗದ ಸುತ್ತಲೂ ಫೈಬರ್ ಗ್ಲಾಸ್ ಅಳವಡಿಸುವಂತೆ ಭಕ್ತರು ಒತ್ತಾಯ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/02/vlcsnap-2019-02-20-12h08m00.jpg)