ಕನ್ನಡ ಚಿತ್ರರಂಗದ ನಾಯಕನಾಗಿ ಶಿವರಾಜ್​​​​​ಕುಮಾರ್ !!

ಬೆಂಗಳೂರು :

Kannada film industry

     ಡಾ||ರಾಜ್​ಕುಮಾರ್ ಪುತ್ರ, ಸೆಂಚುರಿ ಸ್ಟಾರ್ ಶಿವರಾಜ್​ಕುಮಾರ್ ಸ್ಯಾಂಡಲ್​​ವುಡ್​ ನಾಯಕರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

     ಡಾ. ರಾಜ್​​ಕುಮಾರ್​​​​​​​​​​​​​​​​​ ಬಳಿಕ ಕನ್ನಡ ಚಿತ್ರರಂಗದಲ್ಲಿ ಹಿರಿಯಣ್ಣನಾಗಿ ರೆಬಲ್ ಸ್ಟಾರ್ ಅಂಬರೀಶ್​​​​​ , ಚಿತ್ರರಂಗದ ಸಮಸ್ಯೆಗಳನ್ನು ಬಗೆ ಹರಿಸುತ್ತಿದ್ರು. ಆದರೆ ಅಂಬರೀಶ್ ಅಗಲಿಕೆಯಿಂದ ಕನ್ನಡ ಚಿತ್ರರಂಗದಲ್ಲಿ ಯಾರಿಗೆ ನಾಯಕತ್ವದ ಹೊಣೆ ನೀಡಬೇಕು ಎಂಬ ಚರ್ಚೆ ನಡೆಯುತ್ತಲೇ ಇತ್ತು. 

    ಈ ಕುರಿತು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ, ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಹಯೋಗದಲ್ಲಿ, ನಾಗವಾರದಲ್ಲಿರುವ ಶಿವರಾಜ್​​​​​​​​​​ಕುಮಾರ್ ನಿವಾಸದಲ್ಲಿ ಸಭೆ ನಡೆಸಲಾಯಿತು.

Kannada film industry

      ಈ ಸಭೆಯಲ್ಲಿ ಚಿತ್ರರಂಗದ ನಾಯಕರಾಗಿ ಚಿತ್ರರಂಗವನ್ನು ಮುನ್ನಡೆಸುವಂತೆ ಮನವಿ ಮಾಡಲಾಯಿತು. ಎಲ್ಲರ ಮನವಿ ಮೇರೆಗೆ ಶಿವಣ್ಣ ಕೂಡಾ ಇದಕ್ಕೆ ಒಪ್ಪಿಕೊಂಡರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವರಾಜ್​ಕುಮಾರ್, ಚಿತ್ರರಂಗದ ಎಲ್ಲಾ ವಿಭಾಗಗಳ ಗಣ್ಯರು ಜೊತೆ ಸೇರಿರುವುದು ಖುಷಿಯ ವಿಚಾರ. ನಿಮ್ಮೆಲರ ಸಹಕಾರದಿಂದ ಇನ್ಮುಂದೆ ನಾಯಕತ್ವದ ಹೊಣೆ ವಹಿಸಿಕೊಳ್ಳುತ್ತೇನೆ. ಇನ್ಮುಂದೆ ನಾವೆಲ್ಲರೂ ಒಟ್ಟಾಗಿ ಹೋಗೋಣ,ಕನ್ನಡ ಚಿತ್ರರಂಗವನ್ನು ಮಾದರಿಯನ್ನಾಗಿ ಮಾಡೋಣ ಎಂದು ಹೇಳಿದರು. 

       ಈ ಸಭೆಯಲ್ಲಿ ಹಿರಿಯ ನಿರ್ದೇಶಕ ರಾಜೇಂದ್ರಸಿಂಗ್ ಬಾಬು, ನಟ ಸಾಧು ಕೋಕಿಲ, ನಿರ್ಮಾಪಕರಾದ ಸಾ.ರಾ. ಗೋವಿಂದ್, ಜಯಣ್ಣ, ಸೂರಪ್ಪ ಬಾಬು, ಚಿನ್ನೇಗೌಡ, ಭೋಗೇಂದ್ರ, ರಾಮು, ಭಾ.ಮಾ.ಹರೀಶ್, ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್, ನಿರ್ಮಾಪಕ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್​​​ ಸೇರಿದಂತೆ ಚಿತ್ರರಂಗದ ಬಹುತೇಕ ಎಲ್ಲಾ ಗಣ್ಯರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap