ಬೆಂಗಳೂರಿಗರಿಗೆ ಶಾಕ್ : ಹೆಚ್ಚಳವಾಗಲಿದೆ ಕಾವೇರಿ ನೀರಿನ ದರ !!

ಬೆಂಗಳೂರು: 

     ಸಿಲಿಕಾನ್​ ಸಿಟಿ ಜನರಿಗೆ ಜಲ ಮಂಡಳಿ ಶಾಕ್ ನೀಡಲು ಮುಂದಾಗಿದ್ದು, ಶೀಘ್ರದಲ್ಲೇ ಕಾವೇರಿ ನೀರಿನ ದರ ಹೆಚ್ಚಳಕ್ಕೆ ಬೆಂಗಳೂರು ಜಲಮಂಡಳಿ ನಿರ್ಧರಿಸಿದೆ.

     ಸಿಲಿಕಾನ್ ಸಿಟಿಯ ಬಹುತೇಕ ನಾಗರೀಕರು ಕುಡಿಯುವ ನೀರಿಗಾಗಿ ಕಾವೇರಿ ನೀರನ್ನೇ ಅವಲಂಬಿಸಿದ್ದಾರೆ. ಕಳೆದ 6 ವರ್ಷಗಳಿಂದ ಒಂದೇ ರೀತಿ ಇದ್ದ ನೀರಿನ ದರವನ್ನು ಪರಿಷ್ಕರಿಸಲು ಬೆಂಗಳೂರು ಜಲಮಂಡಳಿ ಮುಂದಾಗಿದೆ. 2014ರಲ್ಲಿ ಬೆಂಗಳೂರು ಜಲಮಂಡಳಿ ನೀರಿನ ದರವನ್ನು ಪರಿಷ್ಕರಣೆ ಮಾಡಿತ್ತು. ಈಗ ನೀರಿನ ದರವನ್ನು ಶೇ.30ರಷ್ಟು ಹೆಚ್ಚಳ ಮಾಡುವ ಪ್ರಸ್ತಾವನೆ ಇಡಲಾಗಿದೆ.

     ವಿದ್ಯುತ್ ದರ ಏರಿಕೆಯಿಂದ ಜಲ ಮಂಡಳಿಗೆ ಭಾರಿ ಹೊಡೆತ ಬೀಳ್ತಿದೆ. ಈ ಹಿನ್ನೆಲೆಯಲ್ಲಿ ನೀರಿನ ದರವನ್ನು ಹೆಚ್ಚಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದು, ಸರ್ಕಾರದಿಂದ ಒಪ್ಪಿಗೆ ಬಂದ ಕೂಡಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಜಲ ಮಂಡಳಿ ತಿಳಿಸಿದೆ.

      ಈ ಮೂಲಕ ಅಗತ್ಯ ವಸ್ತುಗಳ ದರ ಏರಿಕೆ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರೀಕರಿಗೆ ಈಗ ಮತ್ತೊಂದು ಶಾಕ್ ಕಾದಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap