ಮಧುಗಿರಿ : ಗಣೇಶ ವಿಸರ್ಜನೆ ವೇಳೆ ಕೆರೆಗೆ ಬಿದ್ದು ಅಣ್ಣ-ತಂಗಿ ಸಾವು!!

ತುಮಕೂರು: 

     ಗಣೇಶ ಮೂರ್ತಿ ನಿಮಜ್ಜನೆಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಕಾಲು ಜಾರಿ ಬಿದ್ದು, ಅಣ್ಣ-ತಂಗಿ ಸಾವನಪ್ಪಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಬ್ಯಾಲ್ಯಾ ಗ್ರಾಮದಲ್ಲಿ ನಡೆದಿದೆ.

      ಗ್ರಾಮದ ವಿದ್ಯಾರ್ಥಿ ದಿಲೀಪ್(11) ಹಾಗೂ ವಿದ್ಯಾರ್ಥಿನಿ ಆಶ್ವಿನಿ(8) ಮೃತ ದುರ್ದೈವಿಗಳು. ಕೆರೆಯ ಬಳಿ ಗಣೇಶ ಮೂರ್ತಿ ನಿಮಜ್ಜನೆಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

      ಇನ್ನು ಸ್ಥಳಕ್ಕೆ ಕೊಡಿಗೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಶವಗಳನ್ನು ಹಸ್ತಾಂತರಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

   

Recent Articles

spot_img

Related Stories

Share via
Copy link
Powered by Social Snap