ವಿಶ್ವನಾಥ್‌ಗೆ ಏಕವಚನದಲ್ಲೇ ಸಿದ್ದರಾಮಯ್ಯ ಲೇವಡಿ!

ಮೈಸೂರು: 

      ಸರಿಯಾಗಿ 6 ತಿಂಗಳಿಗೆ ಅಧ್ಯಕ್ಷಗಿರಿ ಮಾಡಲಿಕ್ಕೆ ಆಗಲಿಲ್ಲ. ಇನ್ನು ಬೇರೆಯವರ ಬಗ್ಗೆ ಏನು ಮಾತಾಡ್ತಾನೆ… ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್‌ ಶಾಸಕ ಎಚ್‌.ವಿಶ್ವನಾಥ್‌ ಅವರನ್ನು ಏಕವಚನದಲ್ಲೇ ಲೇವಡಿ ಮಾಡಿದ್ದಾರೆ.

     ಮೈತ್ರಿ ಮುನ್ನಡೆಸುವಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ ವಿಫಲರಾಗಿದ್ದಾರೆ ಎಂಬ ಎಚ್. ವಿಶ್ವನಾಥ್ ಆರೋಪ ವಿಚಾರದ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಏಕವಚನದಲ್ಲೇ ತಿರುಗೇಟು ನೀಡಿದ್ದಾರೆ.

      ಅವನಿಗೆ ಅಧ್ಯಕ್ಷಗಿರಿಯನ್ನೇ ಮಾಡಲಿಕ್ಕೆ ಆಗದೆ ರಾಜೀನಾಮೆ ಕೊಟ್ಟಿದ್ದಾನೆ, ಅಧ್ಯಕ್ಷನಾಗಿ ಎಷ್ಟು ದಿನ ಆಯ್ತು ಅವ್ನು,ಇನ್ನು ಬೇರೆಯವರ ಬಗ್ಗೆ ಆರೋಪ ಮಾಡುತ್ತಾನೆ ಎಂದು ಕಿಡಿ ಕಾರಿದ್ದಾರೆ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

  

Recent Articles

spot_img

Related Stories

Share via
Copy link
Powered by Social Snap