ತುಮಕೂರು:
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಪ್ತ ಜೆಡಿಎಸ್ ನಾಯಕ ಚಿದಾನಂದ ಗೌಡ ಜೆಡಿಎಸ್ ಪಕ್ಷ ತೊರೆದು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಚಿದಾನಂದ ಗೌಡ ಶಿರಾ ತಾಲೂಕಿನಲ್ಲಿ ಜೆಡಿಎಸ್ ಪ್ರಬಲ ನಾಯಕನಾಗಿದ್ದು, ಚಿದಾನಂದ ಗೌಡ ಶಿರಾ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಗೆ ಆಪ್ತರಾಗಿರುವ ಚಿದಾನಂದ ಇಂದು ಬಿಜೆಪಿಯ ಮಾಜಿ ಸಚಿವ ವಿ.ಸೋಮಣ್ಣ ಸಮ್ಮುಖದಲ್ಲಿ ಬಿಜೆಪಿಗೆ ಸೇರಿರುವುದು ಜೆಡಿಎಸ್ ಪಕ್ಷ ಹಾಗು ಮುಖಂಡರಿಗೆ ಬಿಗ್ ಶಾಕ್ ನೀಡಿದಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
