ತುಮಕೂರು:
ನಡೆದಾಡುತ್ತಿದ್ದ ದೇವರು, ಕಾಯಕ ಯೋಗಿ ಹಾಗೂ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮಿಗಳು ಲಿಂಗೈಕ್ಯರಾಗಿ ಇಂದಿಗೆ 11 ದಿನವಾಗಿದ್ದು, ಶ್ರೀಮಠದಲ್ಲಿ ಇಂದು ಪುಣ್ಯ ಸ್ಮರಣೆ ನಡೆಯುತ್ತಿದೆ.
ಪುಣ್ಯ ಸ್ಮರಣೆಯ ದಿನವಾದ ಇಂದು ಸಿದ್ಧಗಂಗಾ ಮಠಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಬೆಳಗ್ಗೆ 10.30ಕ್ಕೆ ಪುಣ್ಯಸ್ಮರಣೆಯ ರ್ಯಕ್ರಮವು ಶ್ರೀಗಳ ಲಿಂಗ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಇಡಲಾಗಿದ್ದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಆರಂಭವಾಗಲಿದೆ. ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಹಾಗೂ ವಿವಿಧ ಮಠಾಧೀಶರು ಮತ್ತು ರಾಜಕೀಯ ನಾಯಕರು ಗದ್ದುಗೆಗೆ ಪೂಜೆ ನಡೆಸಲಿದ್ದಾರೆ. ವೇದಿಕೆ ಮುಂಭಾಗ ವಿಐಪಿಗಳು, ವಿವಿಐಪಿಗಳು ಹಾಗೂ ಸ್ವಾಮೀಜಿಗಳಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.
ಬೆಳಗ್ಗೆ 4.30 ರಿಂದಲೇ ಶ್ರೀಗಳ ಗದ್ದುಗೆಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಆರಂಭವಾಗಿದ್ದು, ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ ಸೇರಿದಂತೆ ವಿಶೇಷ ಪೂಜೆಗಳು ನಡೆದಿವೆ.
ತಳಿರು ತೋರಣ, ಬಣ್ಣ ಬಣ್ಣದ ಹೂಗಳಿಂದ ಪರಮಪೂಜ್ಯರ ಮಠ ಅಲಂಕೃತಗೊಂಡಿದೆ. ಇಂದಿನ ಪುಣ್ಯಾರಾಧನೆಯಲ್ಲಿ ಬರೋಬ್ಬರಿ 5 ಲಕ್ಷ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದೆ. ದೇಶದ ಮೂಲೆ ಮೂಲೆಗಳಿಂದ ಶ್ರೀಗಳ ಭಕ್ತರು ಶ್ರೀ ಮಠಕ್ಕೆ ಆಗಮಿಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/01/Shivakumara-Swamiji-1.gif)