ಬಳ್ಳಾರಿ:
ಖಾತೆ ಹಂಚಿಕೆ ಕುರಿತಂತೆ ಹೈಕಮಾಂಡ್ ಜೊತೆ ಚರ್ಚೆ ಮಾಡಲು ಮುಖ್ಯ ಮಂತ್ರಿಗಳು ದೆಹಲಿಗೆ ತೆರಳಿದ್ದು. ಇಂದು ಇಲ್ಲ ನಾಳೆ ಖಾತೆ ಹಂಚಿಕೆ ಅಂತಿಮಗೊಳ್ಳಲಿದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮುಖ ಖಾತೆಗಳಿಗೆ ಹಿರಿಯ ಶಾಸಕರು ಪಟ್ಟು ಹಿಡಿದಿರುವುದರಿಂದ ಖಾತೆ ಹಂಚಿಕೆ ವಿಳಂಬವಾಗಿದೆ ಎಂಬುದರಲ್ಲಿ ಹುರುಳಿಲ್ಲ. ಎಲ್ಲವನ್ನು ಯಡಿಯೂರಪ್ಪ ಅವರ ಬಗೆಹರಿಸಲಿದ್ದಾರೆಂದರು. ಉಮೇಶ್ ಕತ್ತಿ, ರಮೇಶ್ ಜಾರಕಿ ಹೊಳಿ ಅವರ ಅಸಮಾಧಾನ ಹೊಂದಿದ್ದಾರೆಂಬ ಪ್ರಶ್ನೆಗೆ ಅದೆಲ್ಲ ಬರುವ ನಾಲ್ಕೈದು ದಿನಗಳಲ್ಲಿ ಸರಿ ಹೋಗಲಿದೆ ಎಂದರು.
ಇನ್ನು ಮುಖ್ಯ ಮಂತ್ರಿಗಳ ಸೂಚನೆಯಂತೆ ನಾನು ನತ್ತು ಪ್ರಭು ಚವ್ಹಾಣ್ ಅವರು ರಾಯಚೂರು, ಯಾದಗಿರಿ ಜಿಲ್ಲೆಗಳನ್ನು ಮುಗಿಸಿ ಇಂದು ಬಳ್ಳಾರಿ ಜಿಲ್ಲೆಯ ಬರ ಮತ್ತು ನೆರೆ ಸಂಕಷ್ಟದ ಬಗ್ಗೆ ಅಧಿಕಾರಿಗಳ ಜೊತೆ ಪರಿಶೀಲನೆ ಸಭೆ ನಡೆಸಿದೆ. ಪ್ರಾಣ ಕಳೆದುಕೊಂಡವರಿಗೆ ಮತ್ತು ಸಂಪೂರ್ಣ ಮನೆ ಕಳೆದುಕೊಂಡವರಿಗೆ ತಲಾ 5 ಲಕ್ಷ ರೂಪಾಯಿ, ಭಾಗಶಃ ಮನೆ ಕಳೆದು ಕೊಂಡವರಿಗೆ 1 ಲಕ್ಷ ರೂಪಾಯಿ. ಅಲ್ಲದೇ ನೆರೆಗೆ ಸಿಲುಕಿದ ಪ್ರತಿ ಕುಟುಂಬಕ್ಕೆ ತಲಾ ಹತ್ತು ಸಾವಿರ ರೂಪಾಯಿ ಪರಿಹಾರ ನೀಡಲಿದೆ. ಇದಕ್ಕಾಗಿ ರಾಜ್ಯ ಸರಕಾರ ಒಂದು ನೂರು ಕೋಟಿ ಮತ್ತು ಕೇಂದ್ರ ಸರಕಾರ 126 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದರು.
ಅಸಮಾಧಾನ:
ಮಾಜಿ ಪ್ರಧಾನಿ ದೇವೆಗೌಡ ಮತ್ತು ಸಿದ್ದರಾಮಯ್ಯ ಅವರ ನಡುವಿನ ವಾಗ್ದಾಳಿ ಬಗ್ಗೆ ಪ್ರತಿಕ್ರಿಯಿಸಿ, ಮತ್ತು ರಾಜ್ಯದಲ್ಲಿನ ಮೈತ್ರಿ ಸರ್ಕಾರದ ಬಗ್ಗೆ ಮೊದಲಿನಿಂದಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಸಮಾಧಾನವಿತ್ತು ಅದಕ್ಕಾಗಿ ಅವರು ಆಗಾಗ್ಗೆ ನಾನು ಮತ್ತೆ ಮುಖ್ಯ ಮಂತ್ರಿ ಆಗುತ್ತೇನೆ ಎಂದು ಹೇಳುತ್ತಿದ್ದರು. ಅವರವರೇ ಕಿತ್ತಾಡಿಕೊಂಡು ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಗೆ ಕಾರಣವಾಗಿದ್ದಾರೆಂದು ಹೇಳಬಹುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/08/bjp-bsy.gif)