ವಿಜಯಪುರ:
ಎಸ್ಎಸ್ಎಲ್ಸಿಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಮರು ಪರೀಕ್ಷೆಯನ್ನು ನಡೆಸುವುದಿಲ್ಲ ಎಂದು ಶಿಕ್ಷಣ ಇಲಾಖೆ ಆಯುಕ್ತ ಜಾಫರ್ ಸ್ಪಷ್ಟನೆ ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಶಿಕ್ಷಕರೊಬ್ಬರು ಪ್ರಶ್ನೆ ಪತ್ರಿಕೆ ಫೋಟೋ ತೆಗೆದು ಪರೀಕ್ಷೆ ಆರಂಭವಾದ ಒಂದು ಗಂಟೆಯ ಬಳಿಕ ಶಿಕ್ಷಕ ಪತ್ರಿಕೆ ಫೋಟೋಗಳನ್ನು ವಾಟ್ಸಪ್ ನಲ್ಲಿ ಹಾಕಿಕೊಂಡಿರುವುದರಿಂದ ಗೊಂದಲ ಸೃಷ್ಟಿಯಾಗಿದೆ. ಈ ಸಂಬಂಧ ಡಿಡಿಪಿಐ ಪ್ರಸನ್ನ ಸಹ ಸಿಂಧಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ, ಮರು ಪರೀಕ್ಷೆಯನ್ನು ನಡೆಸಲ್ಲ, ಹಾಗಾಗಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗೋದು ಬೇಡ ಎಂದು ಜಾಫರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
