ಅಪಘಾತ : ಪರೀಕ್ಷೆಗೆ ಹೋಗುತ್ತಿದ್ದ SSLC ವಿದ್ಯಾರ್ಥಿ ಸಾವು!!

ಮೈಸೂರು: 

      ದ್ವಿಚಕ್ರ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ SSLC ಪರೀಕ್ಷೆ ಬರೆಯಲು ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಸವನಹಳ್ಳಿ ಬಳಿ ನಡೆದಿದೆ. 

      ಹಗಿನವಾಳು ಗ್ರಾಮದಿಂದ ಕಸವನಹಳ್ಳಿಯ ಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಇವರಿಬ್ಬರೂ ಬೈಕ್‌ನಲ್ಲಿ ತೆರಳುತ್ತಿದ್ದರು. ಆಗ ನಿಯಂತ್ರಣ ತಪ್ಪಿದ ಬೈಕ್ ಕಸವನಹಳ್ಳಿ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಣಿಕಂಠ (16)ಮೃತ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ದರ್ಶನ್ (16) ಎಂಬುವವನಿಗೆ ತೀವ್ರ ಗಾಯಗಳಾಗಿವೆ.

     ತೀವ್ರವಾಗಿ ಗಾಯಗೊಂಡ ಮಣಿಕಂಠ ಸ್ಥಳದಲ್ಲಿಯೇ ಮೃತಪಟ್ಟಿದ್ದು, ದರ್ಶನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕ್‌ನಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿ ಮಲ್ಲೇಶ್‌ಗೆ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap