ಬೆಂಗಳೂರು :
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆಯಂಜಿಯೋಪ್ಲಾಸ್ಟಿ ಚಿಕಿತ್ಸೆ ಬಳಿಕ ಸ್ಟೆಂಟ್ ಅಳವಡಿಕೆ ಮಾಡಲಾಗಿದೆ ಎಂದು ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಹೃದಯ ತೊಂದರೆಯಿಂದಾಗಿ ನಿನ್ನೆ ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಬೆಳಗ್ಗೆ ವೈದ್ಯರು ಮತ್ತೊಮ್ಮೆ ತಪಾಸಣೆ ನಡೆಸಿದರು. ಬಳಿಕ ಅವರನ್ನು ಬೆಳಗ್ಗೆ 11 ಗಂಟೆಯ ನಂತರ ಐಸಿಯು ನಿಂದ ವಾರ್ಡ್ಗೆ ಕರೆ ತರಲಾಗಿದೆ. ಸ್ಟೆಂಟ್ ಅಳವಡಿಕೆ ಮಾಡಲಾಗಿದೆ.
ವೈದ್ಯರ ಸಲಹೆ ಮೇರೆಗೆ ಇಂದು ಸಂಜೆ ಹೃದಯಕ್ಕೆ ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆ ಮಾಡಿಸಿಕೊಂಡಿದ್ದೇನೆ.
ಸದ್ಯ ಆಸ್ಪತ್ರೆಯಲ್ಲಿದ್ದು ನಾಳೆ ಮನೆಗೆ ಹೋಗಿ ಕೆಲವು ದಿನ ವಿಶ್ರಾಂತಿ ಪಡೆಯುತ್ತೇನೆ. ಆರೋಗ್ಯವಾಗಿದ್ದೇನೆ.
ಆತಂಕಪಡಬೇಕಾಗಿಲ್ಲ.ಈ ವಿಷಯದ ಬಗ್ಗೆ ಹೆಚ್ಚಿನ ಚರ್ಚೆ ಬೇಡ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ.
— Siddaramaiah (@siddaramaiah) December 11, 2019
ಸಿದ್ದರಾಮಯ್ಯ ಅವರಿಗೆ ಈಗ್ಗೆ ಕೆಲ ಕಾಲದಿಂದ ಹೃದಯ ಸಂಬಂಧಿ ಸಮಸ್ಯೆ ಇತ್ತು. ಹಿಂದೆಯೂ ಅವರಿಗೆ ಆಂಜಿಯೋಪ್ಲಾಸ್ಟ್ ಶಸ್ತ್ರ ಚಿಕಿತ್ಸೆ ಆಗಿತ್ತು. ಇತ್ತೀಚೆಗೆ ಅವರನ್ನ ತಪಾಸಣೆ ನಡೆಸಿದಾಗ ರಕ್ತ ಪರಿಚಲನೆ ಸರಿಯಾಗಿ ಆಗುತ್ತಿಲ್ಲದಿರುವುದು ಗಮನಕ್ಕೆ ಬಂದಿತ್ತು. ಮತ್ತೊಮ್ಮೆ ಆಂಜಿಯೋಪ್ಲಾಸ್ಟ್ ಸರ್ಜರಿ ಅಗತ್ಯವಿರುವುದನ್ನು ವೈದ್ಯರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ಶಸ್ತ್ರ ಚಿಕಿತ್ಸೆ ನಡೆಯಿತು ಎಂದು ವೈದ್ಯರು ತಿಳಿಸಿದ್ಧಾರೆ.
ಸದ್ಯ ಅವರ ಆರೋಗ್ಯ ಸುಧಾರಣೆ ಆಗಿದ್ದು, ಇಂದು ಸಂಜೆ ಆಸ್ಪತ್ರೆಯಿಂದ ನಿವಾಸಕ್ಕೆ ಶಿಫ್ಟ್ ಆಗಲಿರುವ ಸಿದ್ದರಾಮಯ್ಯ, ವೈದ್ಯರ ಸಲಹೆ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಕಾವೇರಿ ನಿವಾಸದಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/10/Siddaramaiah_AFP1.gif)