ಬೀದಿನಾಯಿಗಳ ಹಾವಳಿ : 8 ಮಕ್ಕಳಿಗೆ ಗಂಭೀರ ಗಾಯ!!

ವಿಜಯಪುರ:

       ಹುಚ್ಚು ನಾಯಿಗಳು ಹಾಗೂ ಬೀದಿ ನಾಯಿಗಳ ಕಡಿತಕ್ಕೆ ಜಿಲ್ಲೆಯ ಅಸ್ಕಿ ಗ್ರಾಮದ 8 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಅಸ್ಕಿ ಗ್ರಾಮದಲ್ಲಿ ನಡೆದಿದೆ.

      ಅಸ್ಕಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ನಾಯಿಗಳ ಹಾವಳಿ ಹೆಚ್ಚಾಗಿದೆ. ಈ ಕುರಿತು ಗ್ರಾಮ ಪಂಚಾಯ್ತಿ ಸದಸ್ಯರಿಗೆ ವಿಷಯ ತಿಳಿಸಿದ್ರೂ ಪ್ರಯೋಜನವಾಗುತ್ತಿಲ್ಲ. ಇದುವರೆಗೂ ನಾಯಿಗಳ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗದ ಗ್ರಾಮ ಪಂಚಾಯ್ತಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

       ಮಕ್ಕಳ ದೇಹದ ವಿವಿಧ ಭಾಗಗಳಿಗೆ ಕಚ್ಚಿ ನಾಯಿಗಳು ಗಾಯ ಮಾಡಿವೆ. ಗಾಯಗೊಂಡ ಮಕ್ಕಳಿಗೆ ಚಿಕಿತ್ಸೆ ನೀಡಲು ಸ್ಥಳೀಯ ವೈದ್ಯರು ನಿರಾಕರಿಸಿದ್ದು ತಬ್ಬಿಬ್ಬಾಗಿರುವ ಪಾಲಕರು ಸಿಂಧಗಿ ತಾಲೂಕು ಆಸ್ಪತ್ರೆಗೆ ಹೋಗಲು ಯೋಚಿಸುತ್ತಿದ್ದಾರೆ.

       ಜಿಲ್ಲೆಯಲ್ಲಿ ಬೀದಿನಾಯಿಗಳ ಹಾವಳಿ ಮುಂದುವರಿದಿದ್ದು, ಇತ್ತ ಬೀದಿ ನಾಯಿಗಳ ಕಾಟದಿಂದ ಆತಂಕಕ್ಕೆ ಒಳಗಾಗಿರುವ ಪೋಷಕರು, ತಮ್ಮ ಮಕ್ಕಳನ್ನು ಮನೆಯಿಂದ ಹೊರಗಡೆ ಕಳುಹಿಸಲು ಹೆದರುತ್ತಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap