ಮಂಡ್ಯದಲ್ಲಿ ಸುಮಲತಾ ಗೆ ಬಿಜೆಪಿ ಬೆಂಬಲ!!!

ಬೆಂಗಳೂರು:

      ಬಿಜೆಪಿಯು ಯಾವುದೇ ಷರತ್ತು ವಿಧಿಸದೆ ನನಗೆ ಬೆಂಬಲ ನೀಡಿದೆ ಅದಕ್ಕೆ ನಾನೆಂದಿಗೂ ಋಣಿಯಾಗಿರುತ್ತೇನೆ ಎಂದು ಮಂಡ್ಯ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಷ್ ತಿಳಿಸಿದ್ದಾರೆ.

      ತಮಗೆ ಬಿಜೆಪಿ ಬೆಂಬಲ ಘೋಷಿಸಿರುವ ಹಿನ್ನೆಲೆಯಲ್ಲಿ ಸುಮಲತಾ ಅವರು ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿಯ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.

      ಬಳಿಕ ಮಾತನಾಡಿದ ಸುಮಲತಾ, ನನ್ನನ್ನು ಯಾರೂ ನೇರವಾಗಿ ಭೇಟಿ ಮಾಡಿರಲಿಲ್ಲ. ಫೋನ್ ನಲ್ಲೂ ಹೇಳಿರಲಿಲ್ಲ. ಅಂಬರೀಶ್ ಅವರ ಮೇಲಿನ ಗೌರವದಿಂದ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ನನಗೆ ಬೆಂಬಲ ಸೂಚಿಸಿರುವುದು ನಿಜಕ್ಕೂ ತುಂಬಾ ಸಂತೋಷವಾಗಿದೆ. ಬಿಜೆಪಿಯು ಯಾವುದೇ ಷರತ್ತು ವಿಧಿಸದೆ ನನಗೆ ಬೆಂಬಲ ನೀಡಿದೆ ಅದಕ್ಕೆ ನಾನೆಂದಿಗೂ ಋಣಿಯಾಗಿರುತ್ತೇನೆ ಎಂದಿದ್ದಾರೆ.

      ನಾವು ಅಂಬರೀಶ್ ಅವರ ಮೇಲಿನ ಅಭಿಮಾನದಿಂದ ಬೆಂಬಲ ಕೊಡುತ್ತಿದ್ದೇವೆ. ಹೀಗಾಗಿ ನಾವು ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸ್ಪರ್ಧೆ ಮಾಡಿಸುತ್ತಿಲ್ಲ ಎಂದು ಹೇಳಿದ್ದಾರೆ. ಬಿಜೆಪಿಗೆ ಚುನಾವಣೆಯ ನಂತರ ಬೆಂಬಲ ಕೊಡಬೇಕಾ ಬೇಡವಾ ಅನ್ನೋದು ಜನ ತಿರ್ಮಾನ ಮಾಡುತ್ತಾರೆ ಎಂದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap