ನವದೆಹಲಿ :
ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ಸಿಹಿಸುದ್ದಿ ನೀಡಿದ್ದು, ಅನರ್ಹತೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.
ಇನ್ನು ನಿನ್ನೆಯಷ್ಟೆ ಸ್ಪೀಕರ್ ಅನರ್ಹತೆ ಪ್ರಶ್ನಿಸಿ ಸಾಲಿಸಿಟರ್ ಜನರಲ್ ಮುಕುಲ್ ರೋಹ್ಟಗಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಪೀಠ ನಿರಾಕರಿಸಿತ್ತು. ಆದರೆ, ಇಂದು ಅರ್ಜಿ ವಿಚಾರಣೆಗೆ ಸಂಬಂಧಪಟ್ಟಂತೆ ಲಿಸ್ಟ್ ಮಾಡಿ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಪೀಠ ಹೇಳಿದೆ.
ಈ ಮೂಲಕ ಬಿಎಸ್ ವೈ ಸರ್ಕಾರದಲ್ಲಿ ಸಚಿವ ಸ್ಥಾನದ ಕನಸು ಕಂಡಿದ್ದ ಅನರ್ಹ ಶಾಸಕರಿಗೆ ಕೊಂಚ ರಿಲೀಫ್ ಸಿಕ್ಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
