‘ಅತೃಪ್ತರು ವಿಶ್ವಾಸಮತಯಾಚನೆಗೆ ಬರುವುದು ಕಡ್ಡಾಯವಲ್ಲ ‘ – ಸುಪ್ರೀಂ

ದೆಹಲಿ:

      ಅತೃಪ್ತ ಶಾಸಕರು ಅಧಿವೇಶನದಲ್ಲಿ ಭಾಗವಹಿಸುವಂತೆ ಕಡ್ಡಾಯವಲ್ಲ, ಭಾಗವಹಿಸುವುದು, ಬಿಡುವುದು ಅತೃಪ್ತ ಶಾಸಕರ ವಿವೇಚನೆಗೆ ಬಿಟ್ಟ ವಿಚಾರ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

      ರಾಜ್ಯ ರಾಜಕಾರಣ ಈಗ ಸುಪ್ರೀಂಕೋರ್ಟ್ ಅಂಗಳದಲ್ಲಿದ್ದು, ರಾಜೀನಾಮೆ ನೀಡಿರುವ ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಿನ್ನೆ ನಡೆದಿದ್ದು ಇಂದು ತೀರ್ಪು ಹೊರಬಿದ್ದಿದೆ.

      ಈ ಕುರಿತು ತೀರ್ಪು ನೀಡಿರುವ ಸುಪ್ರೀಂ, ಸಂವಿಧಾನದ ಸಮತೋಲನ ಅಗತ್ಯ. ರಾಜೀನಾಮೆ ನೀಡಿರುವ 15 ಶಾಸಕರು ಅಧಿವೇಶನದಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ. ಹಾಜರಾಗಬೇಕೋ ಬೇಡವೋ ಎನ್ನುವುದು ಶಾಸಕರ ವಿವೇಚನೆಗೆ ಬಿಟ್ಟ ವಿಚಾರ. ಅತೃಪ್ತ ಶಾಸಕರ ಮೇಲೆ ವಿಪ್ ಜಾರಿಗೊಳಿಸಿ ಸದನಕ್ಕೆ ಹಾಜರಾಗುವಂತೆ ಒತ್ತಾಯಿಸುವಂತಿಲ್ಲ. ಅತೃಪ್ತರಿಗೆ ವಿಪ್ ಅನ್ವಯವಾಗುವುದಿಲ್ಲ. ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

     ಈ ವೇಳೆ ರಾಜೀನಾಮೆ ಅಂಗೀಕಾರಕ್ಕೆ ದಿನ ನಿಗದಿ ಪಡಿಸದ ಕೋರ್ಟ್ ನಿರ್ದಿಷ್ಟ ಸಮಯದಲ್ಲಿ ಅತೃಪ್ತ ಶಾಸಕರ ರಾಜೀನಾಮೆ ನಿರ್ಧಾರ ಮಾಡಿ ಎಂದು ಸ್ಪೀಕರ್ ಅವರಿಗೆ ಆದೇಶ ನೀಡಿದೆ. ಸ್ಪೀಕರ್ ನಿರ್ಧಿಷ್ಟ ಕಾಲಮಿತಿಯೊಳಗೆ ರಾಜಿನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ. 

      ತಮ್ಮ ರಾಜೀನಾಮೆಯನ್ನು ಶೀಘ್ರವಾಗಿ ಅಂಗೀಕಾರ ಮಾಡಬೇಕೆಂದು ಕರ್ನಾಟಕ ವಿಧಾನಸಭೆ ಸ್ಪೀಕರ್‌ಗೆ ನಿರ್ದೇಶನ ನೀಡಿರೆಂದು ಮನವಿ ಮಾಡಿ ಅತೃಪ್ತ ಶಾಸಕರು ಸುಪ್ರೀಂ ಮೊರೆ ಹೋಗಿದ್ದರು. ಇದಕ್ಕೆ ವಿರುದ್ಧವಾಗಿ ಸ್ಪೀಕರ್ ಸಹ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

      ಅತೃಪ್ತ ಶಾಸಕರು, ಸ್ಪೀಕರ್ ರಮೇಶ್ ಕುಮಾರ್, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪರವಾಗಿ ನಿನ್ನೆ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ಸುಧೀರ್ಘ ವಾದ ಮಂಡಿಸಿದ್ದು, ವಾದ ಆಲಿಸಿದ ಸಿಜೆಐ ರಂಜನ್‌ ಗೊಗೋಯ್ ನೇತೃತ್ವದ ಪೀಠವು ಇಂದು ತನ್ನ ತೀರ್ಪು ಪ್ರಕಟಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap