ಬೆಂಗಳೂರು:
ತಮಿಳುನಾಡು ಮೂಲದ ಮೂವರು ಜಿಹಾದಿಗಳನ್ನು ಬೆಂಗಳೂರು ಪೊಲೀಸರ ನೆರವಿನಿಂದ ತಮಿಳುನಾಡು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಧಿತರನ್ನು ಮೊಹಮ್ಮದ್ ಹನೀಫ್ ಖಾನ್, ಇಮ್ರಾನ್ ಖಾನ್ ಮತ್ತು ಉಸ್ಮಾನ್ ಗನಿ ಮೊಹಮ್ಮದ್ ಝೈನ್ ಎಂದು ಗುರುತಿಸಲಾಗಿದೆ. ಧಾರ್ಮಿಕ ವಿರೋಧಿಗಳ ಮೇಲೆ ಕಾರ್ಯಾಚರಣೆ ನಡೆಸಲು ಸಿದ್ಧತೆ ನಡೆಸುತ್ತಿದ್ದ ಈ ಮೂವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರ ಸಹಾಯದಿಂದ ಬಂಧಿಸಲಾಗಿದೆ.
ಅವರಿಂದ ಮೂರು ಪಿಸ್ತೂಲ್ ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಬುಧವಾರ ಚೆನ್ನೈ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಆರೋಪಿಗಳು ಮಂಗಮ್ಮನ ಪಾಳ್ಯ, ಎಚ್ಎಸ್ಆರ್ ಲೇಔಟ್, ತಿಲಕ್ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಓಡಾಡುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/01/jihad.gif)