ಕಲಬುರಗಿ:
ಕ್ವಾರಂಟೈನ್ ಕೇಂದ್ರದ ವಾಸ ಮುಗಿಸಿ ಮನೆಗೆ ಹೊರಟಿದ್ದ ವ್ಯಕ್ತಿ ಮನೆ ಸೇರುವ ಮುನ್ನವೇ ಸಾವಿಗೀಡಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಕಲಬುರಗಿ ನಗರದ ಇಂದಿರಾ ನಗರದ ನಿವಾಸಿ ಚಂದ್ರಕಾಂತ್ ನಾಯಿಕೋಡಿ (32) ಮೃತ ದುರ್ದೈವಿ. ಬಿಸಿಎಂ ಹಾಸ್ಟೆಲ್ನಲ್ಲಿ ಅಡುಗೆಭಟ್ಟರಾಗಿದ್ದ ಚಂದ್ರಕಾಂತ ಕೊರೊನಾ ಸೋಂಕಿತನ ಸಂಪರ್ಕಕ್ಕೆ ಬಂದಿದ್ದರಿಂದ ಬಿಸಿಎಂ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅವರ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಅವಧಿ ಸೋಮವಾರ ಮುಗಿದಿತ್ತು. ಅವರ ಕೊರೊನ ಟೆಸ್ಟ್ ರಿಪೋರ್ಟ್ ಕೂಡ ನೆಗೆಟಿವ್ ಬಂದಿತ್ತು.
ಕ್ವಾರಂಟೈನ್ ಅವಧಿ ಮುಗಿದಿದ್ದರಿಂದ ಮನೆಗೆ ಹೋಗಲು ಸಂಬಂಧಿ ಜೊತೆ ಬೈಕ್ನಲ್ಲಿ ತೆರಳುವಾಗ ಮಾರ್ಗ ಮಧ್ಯೆ ಬೈಕ್ನಿಂದ ಬಿದ್ದು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಿಸದೆ ಚಂದ್ರಕಾಂತ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆದರೆ ಅವರ ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.
ವೈದ್ಯಾಧಿಕಾರಿಗಳು ಚಂದ್ರಕಾಂತ್ ಅವರ ಗಂಟಲು ದ್ರವವನ್ನು ಪಡೆದು ಮತ್ತೆ ಕೊರೊನಾ ಪರೀಕ್ಷೆಗಾಗಿ ಲ್ಯಾಬ್ ಕಳುಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/05/Kalburgi-hospital.gif)