ನೌಕಾನೆಲೆಯಲ್ಲಿ ಬೆಂಕಿ ಅವಘಡ : ಕಮಾಂಡರ್ ಸಾವು!

ಕಾರವಾರ: 

     ಭಾರತೀಯ ನೌಕಾ ಸೇನೆಯ ಯುದ್ದ ವಿಮಾನ ವಾಹಕ ನೌಕೆ ಐಎನ್​ಎಸ್ ವಿಕ್ರಮಾದಿತ್ಯದ ಬಾಯ್ಲರ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಲೆಫ್ಟಿನೆಂಟ್ ಕಮಾಂಡರ್ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. 

      ಇಂದು ಬೆಳಗ್ಗೆ ವಿಕ್ರಮಾದಿತ್ಯದ ನೌಕಾ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿರುವ ವೇಳೆ ನೌಕೆಯ ಒಳಭಾಗದ ಬಾಯ್ಲರ್ ಕಂಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸುವ ಸಮಯದಲ್ಲಿ ಲೆಫ್ಟಿನೆಂಟ್ ಕಮಾಂಡರ್ ಡಿಎಸ್ ಚೌವ್ಹಾಣ್ ಮೃತಪಟ್ಟು 7 ಮಂದಿ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದಾರೆ.

      ಗಾಯಾಳುಗಳನ್ನು ಪತಂಜಲಿ ನೌಕಾ ಆಸ್ಪತ್ರೆಗೆ ಸೇರಿಸಲಾಗಿದ್ದು, ಬಾಯ್ಲರ್ ನಲ್ಲಿದ್ದ ಬೆಂಕಿಯನ್ನು ಸಿಬ್ಬಂದಿ ನಿಯಂತ್ರಣಕ್ಕೆ ತಂದು ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಚೌವ್ಹಾಣ್ ಅವರನ್ನು ಕೂಡಲೇ ಪತಂಜಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ನೌಕಾಸೇನೆ ತಿಳಿಸಿದೆ.

      ಇಲ್ಲಿನ ಕದಂಬ ನೌಕಾನೆಲೆಯಲ್ಲಿ ವಿಕ್ರಮಾದಿತ್ಯ ಲಂಗರು ಹಾಕುವ ವೇಳೆ ಘಟನೆ ನಡೆದಿದೆ. ಬೆಂಕಿ ನಂದಿಸಲಾಗಿದೆ ಎಂದು ನೌಕಾ ಸೇನೆಯ ಪ್ರಕಟಣೆ ತಿಳಿಸಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap