ತನ್ನಿಂದ ಮನೆಯವರಿಗೆ ಕೊರೊನಾ ; ಪಶ್ಚಾತ್ತಾಪದಿಂದ ವೃದ್ಧೆ ನೇಣಿಗೆ ಶರಣು!!

ಬೆಂಗಳೂರು: 

     ತನ್ನಿಂದಲೇ ಕುಟುಂಬಸ್ಥರಿಗೆ ಕೊರೊನಾ ಸೋಂಕು ಹಬ್ಬಿದೆ ಎಂದು ‌ಮನನೊಂದು ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.

      ಹೌದು, ಕುಣಿಗಲ್ ಮೂಲದ 60 ವರ್ಷದ ವೃದ್ಧೆ ಕೊರೊನಾ ಪಾಸಿಟಿವ್ ದೃಢಪಟ್ಟು ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ನಿನ್ನೆ ತಡರಾತ್ರಿ 2 ಗಂಟೆ ಸುಮಾರಿಗೆ ಬಾತ್ ರೂಮ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

     ಗರದ ರಾಜಗೋಪಾಲ ನಗರ ಠಾಣಾ ವ್ಯಾಪ್ತಿಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. ಇದೇ ತಿಂಗಳ 18ರಂದು ವೃದ್ಧೆಯಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೃದ್ಧೆ ಆಸ್ಪತ್ರೆಗೆ ದಾಖಲಿಸಿದ ಕೆಲ ದಿನಗಳ ನಂತರ ಕುಟುಂಬಸ್ಥರ ಗಂಟಲು‌ ದ್ರವ ಪರೀಕ್ಷೆ ನಡೆಸಿದಾಗ ಮಗಳು, ಅಳಿಯ ಹಾಗೂ ಮೊಮ್ಮಗನಿಗೆ ಕೂಡ ಸೋಂಕು ತಗುಲಿರುವುದು ದೃಢವಾಗಿತ್ತು. ತನ್ನಿಂದಲೇ ಕುಟುಂಬಸ್ಥರಿಗೆ ಕೊರೊನಾ ಹಬ್ಬಿದೆ ಎಂಬ ಭಾವನೆಯಿಂದ ಮನನೊಂದ ವೃದ್ಧೆ ತಡರಾತ್ರಿ 2.30ಕ್ಕೆ ಕೋವಿಡ್ ವಾರ್ಡ್​ನ ಬಾತ್ ರೂಂನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

      ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಹಾಗೂ ಉತ್ತರ ವಿಭಾಗ ಡಿಸಿಪಿ ಶಶಿಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap