ಕೊಬ್ಬರಿಗೆ ಬೆಳೆಗಾರರಿಗೆ ಸಿಹಿ ಸುದ್ದಿ : ಪ್ರೋತ್ಸಾಹ ಬೆಲೆ ಹೆಚ್ಚಳ!!

ಬೆಂಗಳೂರು: 

     ರಾಜ್ಯದಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಹೆಚ್ಚಿನ ನೆರವು ಒದಗಿರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಉಂಡೆ ಕೊಬ್ಬರಿಗೆ ಹೆಚ್ಚಿನ ಪ್ರೋತ್ಸಾಹಧನ ನೀಡಲು ರಾಜ್ಯ ಸರ್ಕಾರ ನಿರ್ಧಾರಿಸಿದೆ.

     ವಿಧಾನಸೌಧದಲ್ಲಿ ಗುರುವಾರ ನಡೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಸ್ಥಿರೀಕರಣ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.’

     ಕೇಂದ್ರ ಸರ್ಕಾರ ಉಂಡೆ ಕೊಬ್ಬರಿಗೆ ಕ್ವಿಂಟಲ್‌ಗೆ ₹10,300 ಬೆಂಬಲ ಬೆಲೆ ನಿಗದಿ ಮಾಡಿತ್ತು. ರೈತರಿಗೆ ಇನ್ನೂ ಹೆಚ್ಚಿನ ಬೆಂಬಲ ಬೆಲೆ ಸಿಗಬೇಕು ಎಂಬ ಕಾರಣಕ್ಕೆ, ರೈತರ ಬೇಡಿಕೆ ಮನ್ನಿಸಿ, ಕ್ವಿಂಟಲ್‌ಗೆ ₹1,000 ನೀಡಲು ತೀರ್ಮಾನಿಸಲಾಯಿತು. ಈ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಇದರಿಂದ ಪ್ರತಿ ರೈತರಿಗೆ ಒಂದು ಕ್ವಿಂಟಲ್‌ಗೆ ₹11,300 ಬೆಂಬಲ ಬೆಲೆ ಸಿಕ್ಕಂತಾಗುತ್ತದೆ ಎಂದು ಅವರು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap