ಅನರ್ಹ ಶಾಸಕರನ್ನು ಬಿಜೆಪಿ ಕೈಬಿಡಲ್ಲ – ಬಸವರಾಜ್ ಬೊಮ್ಮಾಯಿ

ಕಲಬುರಗಿ :

     ಅನರ್ಹ ಶಾಸಕರನ್ನು ಯಾವುದೇ ಕಾರಣಕ್ಕೂ ಬಿಜೆಪಿ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

      ಕಲಬುರಗಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಅವರ ತೀರ್ಪಿನ ಪ್ರಕಾರ ಅನರ್ಹ ಶಾಸಕರಿಗೆ ಸ್ಪರ್ಧೆ ಮಾಡೋಕೆ ಆಗಲ್ಲ. ಇಲ್ಲಿ ಸಾಂವಿಧಾನಿಕ ಮತ್ತು ರಾಜಕೀಯ ಗೊಂದಲ ಇದೆ. ಅದಕ್ಕಾಗಿ ಈಗಾಗಲೇ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ಆದರೆ, ಅನರ್ಹ ಶಾಸಕರನ್ನು ಯಾವುದೇ ಕಾರಣಕ್ಕೂ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

      ಅನರ್ಹ ಶಾಸಕರ ಕಾನೂನಾತ್ಮಕ ವಿಚಾರ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ಕಾನೂನು ಪ್ರಕ್ರಿಯೆ ಏನಾಗುತ್ತೋ ಎಂದು ಕಾದು ನೋಡೋಣ. ಅನರ್ಹರ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಅನ್ನೋದರ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಆಗುತ್ತೆ ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Dailyhunt

Recent Articles

spot_img

Related Stories

Share via
Copy link
Powered by Social Snap