ಬೀದರ್ : ಪಂಕ್ಚರ್ ಹಾಕುತ್ತಿದ್ದವರಿಗೆ ಲಾರಿ ಡಿಕ್ಕಿ , ಮೂವರ ದುರ್ಮರಣ!!!

ಬೀದರ್ :

     ಗೂಡ್ಸ್ ಕ್ಯಾರಿಯರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 9 ರ ಮಿನಕೇರಾ ಕ್ರಾಸ್ ಬಳಿ ನಡೆದಿದೆ .

     ಮೃತರನ್ನು ಅನ್ಸರ್ ಬಸಂತಪೂರ್ (32), ವಿಜಯ ಕುಮಾರ್ ಬಸಂತಪೂರ್ (24), ಇಸ್ಮಾಯಿಲ್ (25) ಎಂದು ಗುರುತಿಸಲಾಗಿದೆ.

      ಮೃತರು ಗೂಡ್ಸ್ ಕ್ಯಾರಿಯರ್ ನಲ್ಲಿ ಈರುಳ್ಳಿ ತುಂಬಿಕೊಂಡು ಹೈದರಾಬಾದ್ ಗೆ ಹೊರಟಿದ್ದರು. ಈ ವೇಳೆ ವಾಹನದ ಟೈರ್ ಪಂಕ್ಚರ್ ಆಗಿದ್ದರಿಂದ ಮಿನಕೇರಾ ಪ್ಲೈಓವರ್ ಮೇಲೆ ಮತ್ತೊಂದು ಟೈರ್ ಜೋಡಣೆ ಮಾಡುತ್ತಿದ್ದರು‌. ಈ ವೇಳೆ ಲಾರಿ ಹರಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

      ಘಟನಾ ಸ್ಥಳಕ್ಕೆ ಬೀದರ್ ಗ್ರಾಮೀಣಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಚಾಲಕನಿಗಾಗಿ ಹುಡುಕಾಟ ನಡೆದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link