ಚಿತ್ರದುರ್ಗ:
ಮೈನ್ಸ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ, 9 ತಿಂಗಳ ಗರ್ಭಿಣಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರ ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಗ್ರಾಮದ ಬಳಿ ಘಟನೆ ನಡೆದಿದೆ.
9 ತಿಂಗಳ ಗರ್ಭಿಣಿ ದೀಪಾ (30), ಪತಿ ಮಹಾಂತೇಶ (32), ದೀಪಾ ಸಹೋದರನ ಪುತ್ರ ಚೇತನ್ (10) ಮೃತ ದುರ್ದೈವಿಗಳು.
ದೀಪಾ ಅವರ ಮಾಸಿಕ ತಪಾಣೆಗಾಗಿ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ಮೂವರು ಬಂದಿದ್ದರು. ತಪಾಸಣೆ ಬಳಿಕ ಗ್ರಾಮಕ್ಕೆ ತೆರಳುವ ವೇಳೆ ಈ ದುರ್ಘಟನೆ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಇಬ್ಭಾಗವಾಗಿದೆ.
ಇದೇ ಸ್ಥಳದಲ್ಲಿ ಸಾಕಷ್ಟು ಬಾರಿ ಅಪಘಾತಗಳು ನಡೆದಿದ್ದರೂ ಮೈನ್ಸ್ ಕಂಪನಿ ಎಚ್ಚೆತ್ತುಕೊಂಡಿಲ್ಲ ಎಂದು ಸ್ಥಳೀಯರು ಮೈನ್ಸ್ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಿಂದಾಗಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.
ಸ್ಥಳಕ್ಕೆ ಚಿತ್ರದುರ್ಗ ಪೋಲಿಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/road-accident-1527968091397.jpg)