ಕ್ಯಾಂಟರ್ ಪಲ್ಟಿ : ಮೂವರ ದುರ್ಮರಣ!!!

ಬೆಳಗಾವಿ :

      ಮಹಾರಾಷ್ಟ್ರದಿಂದ ರಾಮಪುರ ಗ್ರಾಮಕ್ಕೆ ದ್ರಾಕ್ಷಿ ಹಣ್ಣು ಸಾಗಿಸುತ್ತಿದ್ದ ಕ್ಯಾಂಟರ್ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಕ್ರಾಸ್ ಬಳಿ ನಡೆದಿದೆ.

      ಜೇವರ್ಗಿ-ಸಂಕೇಶ್ವರ್ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಸುವರ್ಣ ಧನ್ಯಪ್ಪಗೊಳ, ಮಾದೇವಿ ಪಡಸಲಗಿ ಮತ್ತು ರಾಜು ನೇಸರ ಎಂದು ಗುರುತಿಸಲಾಗಿದೆ. ಇವರೆಲ್ಲರು ವಿಜಯಪುರ ಜಿಲ್ಲೆಯ ಧನ್ಯಾಳ, ದಾಶ್ಚಾಳ ಹಾಗೂ ರಾಂಪುರದ ನಿವಾಸಿಗಳೆಂದು ತಿಳಿದುಬಂದಿದೆ.

      ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಬಿಜಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recent Articles

spot_img

Related Stories

Share via
Copy link
Powered by Social Snap