ತುಮಕೂರು :
ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ನಾಗಮಂಗಲದಲ್ಲಿ ಆಯೋಜಿಸಿದ್ದ ಆರ್ಕೆಸ್ಟ್ರಾದ ನಿಮಿತ್ತ ಭದ್ರಾವತಿಯ ಗಂಧರ್ವ ಆರ್ಕೆಸ್ಟ್ರಾ ತಂಡದ ನಾಲ್ವರು ಊಟ ಮಾಡಿಕೊಂಡು ರಾತ್ರಿ ಮಾರುತಿ ಸುಜುಕಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 206 ತಿಪಟೂರು ಸಮೀಪದ ಮಾದಿಹಳ್ಳಿ ಬಳಿಯ ಡಾಬಾವೊಂದರ ಬಳಿ ಅತಿ ವೇಗವಾಗಿ ಮುನ್ನುಗ್ಗಿದ ಭಾರೀ ವಾಹನವೊಂದು ಇವರ ಕಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಯುವಕರಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಆತನನ್ನು ಸಮೀಪದ ತಿಪಟೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗಿರೀಶ್ (23), ಯೋಗಿಶ್ (25),ಪ್ರವೀಣ್ (24) ಮೃತ ಯುವಕರು. ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದ್ದು, ತಿಪಟೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಯುವಕರು ಭದ್ರವತಿ ಮೂಲದವರು ಎನ್ನಲಾಗಿದೆ.
ಕಾರು ನಜ್ಜುಗುಜ್ಜಾಗಿತ್ತು. ಡಾಬಾದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ತಿಪಟೂರು ಪಿಎಸ್ ಐ ಕಾಂತರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
