ಚಾಮರಾಜನಗರ:
ಕಳೆದ 20 ದಿನಗಳಿಂದ ಇಪ್ಪತ್ತಕ್ಕೂ ಹೆಚ್ಚು ಜಾನುವಾರುಗಳನ್ನು ಬಲಿ ಪಡೆದಿದ್ದ ಹುಲಿಯೊಂದನ್ನು ಇಂದು ಸೆರೆ ಹಿಡಿಯಲಾಗಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯಲ್ಲಿ ಹುಲಿಯೊಂದು ಸುಮಾರು 20 ಹಸು ಮತ್ತು ಮೇಕೆ ಬಲಿ ಪಡೆದಿತ್ತು. ಬೆಳಗ್ಗೆಯಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ವೈದ್ಯರು ಆನೆಗಳ ಸಹಾಯದಿಂದ ಹುಲಿಗೆ ಪತ್ತೆಗೆ ಹುಡುಕಾಡಿದರು.
ಬೆಳಗ್ಗೆ 11 ಗಂಟೆ ಸಮಯದಲ್ಲಿ ಅಕ್ರಂ ಎಂಬುವವರು ಹುಲಿ ಅರಿವಳಿಕೆ ಚುಚ್ಚುಮದ್ದು ಶೂಟ್ ಮಾಡಲು ಯಶಸ್ವಿಯಾದರು. ಬಳಿಕ ಹುಲಿಯು ಕುಂದುಕೆರೆ ವಲಯದ ಪರಮೇಶ್ವರಪ್ಪ ಅವರ ಜಮೀನ ಬಳಿ ಸೆರೆಯಾಯಿತು.
ಕಳೆದ ಇಪ್ಪತ್ತಕ್ಕೂ ಹೆಚ್ಚು ದಿನಗಳಿಂದ ಜಾನುವಾರುಗಳನ್ನು ಹಿಡಿದು ತಿನ್ನುತ್ತಿದ್ದ ಈ ಹುಲಿಯನ್ನು ಸೆರೆ ಹಿಡಿದ ಕಾರಣ ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/05/Tiger.gif)