ಬೆಂಗಳೂರು:
‘ಈ ಬಾರಿ ಹಂಪಿ ಉತ್ಸವ ಆಚರಿಸದಿರಲು ಸರ್ಕಾರ ನಿರ್ಧರಿಸಿದೆ ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಅವರು, ‘ಕಳೆದ ವರ್ಷ 15 ಕೋಟಿ ಖರ್ಚು ಮಾಡಿ ಉತ್ಸವ ನಡೆಸಲಾಗಿತ್ತು. ಉತ್ಸವಕ್ಕೆ ತಿಂಗಳ ಸಿದ್ಧತೆ ಬೇಕಾಗಿರುತ್ತದೆ. ಕಾರಣಾಂತರಗಳಿಂದ ಸಿದ್ಧತೆಯೂ ನಡೆದಿಲ್ಲ. ಹೀಗಾಗಿ ಮುಖ್ಯಮಂತ್ರಿ ಜತೆಗೆ ಚರ್ಚಿಸಿ ಉತ್ಸವ ನಡೆಸದಿರಲು ನಿರ್ಧರಿಸಿದ್ದೇವೆ’ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿ ಉತ್ಸವಕ್ಕೆಂದೇ 10ಕೋಟಿ ರೂ,ಗಳ ಅನುದಾನವನ್ನು ತೆಗೆದಿರಿಸುತ್ತಿತ್ತು, ಆದರೆ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಮೇಲೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಬಜೆಟ್ನಲ್ಲಿ ಹಂಪಿ ಉತ್ಸವಕ್ಕೆ ಯಾವುದೇ ಅನುದಾನವನ್ನು ತೆಗೆದಿರಿಸಿರಲಿಲ್ಲ. ರಾಜ್ಯ ಸರ್ಕಾರ ಹಂಪಿ ಉತ್ಸವಕ್ಕೆ ಅನುದಾನವನ್ನೇ ಬಿಡುಗಡೆ ಮಾಡಿಲ್ಲವಾದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಸಂಪನ್ಮೂಲ ಕ್ರೋಢೀಕರಿಸಿ ಹಂಪಿ ಉತ್ಸವ ನೆರವೇರಿಸುವುದಾಗಿ ಹಂಪಿ ಉತ್ಸವ ನಡೆಸುವುದಾಗಿ ಸಚಿವರು ತಿಳಿಸಿದ್ದಾರೆ.
‘ಜಿಲ್ಲೆಯ ಏಳು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವಾಗ ಹಂಪಿ ಉತ್ಸವ ನಡೆಸಬೇಕೇ ಅಥವಾ ಬೇಡವೇ ಎನ್ನುವುದರ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ನಂತರ ಸರ್ಕಾರದ ಮಟ್ಟದಲ್ಲಿಯೂ ಚರ್ಚಿಸಿ, ತೀರ್ಮಾನಕ್ಕೆ ಬರಲಾಗುವುದು’ ಎಂದು ಹೇಳಿದ್ದರು.
‘ಕಳೆದ ವರ್ಷವೂ ಜಿಲ್ಲೆಯಲ್ಲಿ ಬರ ಬಿದ್ದಿತ್ತು. ಆದರೂ, ಹಂಪಿ ಉತ್ಸವ ನಡೆಸಲಾಗಿತ್ತು. ಈ ಸಲ ಬರದ ನೆಪವೊಡ್ಡಿ ಕಾರ್ಯಕ್ರಮ ರದ್ದುಗೊಳಿಸಬಾರದು’ ಎಂದು ಕಲಾವಿದರು ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
