ತುಮಕೂರು :
ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ ಯಾವುದೇ ಭಕ್ತಾಧಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ.
ಪೇಜಾವರ ಶ್ರೀಗಳು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿ, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀಗಳನ್ನ ನೋಡಿ ಸಮಾಧಾನವಾಯ್ತು. ನಾನು ಹೋಗಿ ಶ್ರೀಗಳನ್ನ ನೋಡಿದ್ದೇನೆ. ಆದ್ರೆ ಶ್ರೀಗಳಿಗೆ ಮಾತನಾಡಿಸಲು ಆಗಲಿಲ್ಲ, ಅವರು ನಮ್ಮನ್ನ ನೋಡಿದ್ದಾರೆ. ಆ ಸಂದರ್ಭದಲ್ಲಿ ಚಿಕ್ಕ ಶ್ರೀಗಳು ನಮ್ಮ ಜೊತೆ ಇದ್ರು ಎಂದು ಪೇಜಾವರ ಶ್ರೀ ತಿಳಿಸಿದರು.
ವೈದ್ಯರ ಬಳಿ ನಾನು ಮಾತನಾಡಿದ್ದೇನೆ, ಅವರೂ ಧೈರ್ಯ ಹೇಳಿದ್ದಾರೆ. ಶ್ರೀಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಭಕ್ತಾಧಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/01/pjimage-20.gif)