ತುಮಕೂರು : ಸಿದ್ಧಗಂಗಾ ಶ್ರೀಗಳ 113ನೇ ಜಯಂತ್ಯೋತ್ಸವಕ್ಕೆ ಬ್ರೇಕ್!!

ತುಮಕೂರು:

      ಸಿದ್ದಗಂಗಾ ಮಠಕ್ಕೆ ಮಾರಕ ಕೊರೊನಾ ಭೀತಿ ತಟ್ಟಿದ್ದು, ಶ್ರೀ ಶಿವಕುಮಾರ ಸ್ವಾಮೀಜಿಯವರ 113ನೇ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ತಡೆ ನೀಡಲಾಗಿದೆ.

      ರಾಜ್ಯಾದ್ಯಂತ ಮಾರಕ ಕೊರೊನಾ ಸೋಂಕು ಆತಂಕ ಸೃಷ್ಟಿಸಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಡುವೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಮಾರಕ ಕೊರೊನಾ ಭೀತಿ ತಟ್ಟಿದೆ. ಏಪ್ರಿಲ್ 5 ರಂದು ಶಿವಕುಮಾರ ಸ್ವಾಮೀಜಿಗಳ 113 ನೇ ಜಯಂತ್ಯುತ್ಸವ ಆಯೋಜಿಸಿದ್ದು, ಜಿಲ್ಲಾಡಳಿತ ಇದಕ್ಕೆ ಅನುಮತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲು ಮಠದ ಆಡಳಿತ ಮಂಡಳಿ ತೀರ್ಮಾನಿಸಿದೆ ಎಂದು ಹೇಳಲಾಗಿದೆ.

Image result for siddaganga mutt

      ಮಠದಲ್ಲಿ ಸದ್ಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿದ್ದು, ಕೊರೊನಾ ಸೋಂಕು ಭೀತಿಯಿಂದ ಮುಂಜಾಗ್ರತಾ ಕ್ರಮವಾಗಿ ಮಠದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆದಷ್ಟು ಬೇಗ ಮನೆಗಳಿಗೆ ಕಳುಹಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. ಸದ್ಯ 10 ಸಾವಿರ ವಿದ್ಯಾರ್ಥಿಗಳು ಮಠದಲ್ಲಿ ಓದುತ್ತಿದ್ದು, 1 ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿದೆ. ಪರೀಕ್ಷೆ ಮುಗಿದ ಕೂಡಲೇ ಅವರನ್ನು ಊರಿಗೆ ಕಳುಹಿಸಲು ನಿರ್ಧರಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap