ಶಿರಾ : ರಸ್ತೆ ಅಪಘಾತದಲ್ಲಿ 3 ಯುವಕರ ದುರ್ಮರಣ!!!

ತುಮಕೂರು:

      ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟ ಘಟನೆ ಶಿರಾ-ಹಿರಿಯೂರು ರಾಷ್ಟ್ರೀಯ ಹೆದ್ದಾರಿ- 48ರ ಮಾನಂಗಿ ಎಂಬಲ್ಲಿ ನಡೆದಿದೆ. 

      ಇಂದು ಮುಂಜಾನೆ 2:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚೇತನ್(27), ವಿನಯ್(28) ಹಾಗೂ ಲಿಖಿತ್(26)  ಮೃತಪಟ್ಟಿದ್ದಾರೆ. ಹೇಮಂತ್(28) ಹಾಗೂ ಲೋಹಿತ್(27) ಎಂಬವರು ಗಾಯಗೊಂಡಿದ್ದು, ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಉಡುಪಿ ಮೂಲದವರೆಂದು ತಿಳಿದುಬಂದಿದೆ.

      ಬೆಂಗಳೂರಿನಿಂದ ಉಡುಪಿಯತ್ತ ಬರುತ್ತಿದ್ದ ಹುಂಡಾಯ್ ಐ20 ಕಾರು ಚಾಲಕನ ನಿಯಂತ್ರಣ ತಪ್ಪಿ ಮಾನಂಗಿ ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚೇತನ್ ಮತ್ತು ವಿನಯ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಲಿಖಿತ್ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

      ಘಟನೆಯ ಬಗ್ಗೆ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recent Articles

spot_img

Related Stories

Share via
Copy link