ತುಮಕೂರು : ಬಯಲಾಂಜನೇಯ ದೇವಾಲಯದಲ್ಲಿ ಕಳ್ಳತನ!!!

ತುಮಕೂರು:

      ದೇವಾಲಯದ ಹುಂಡಿ ಹೊಡೆದು ದುಷ್ಕರ್ಮಿಗಳು ಲಕ್ಷಕ್ಕೂ ಅಧಿಕ ಹಣವನ್ನು ಕಳ್ಳತನ ಮಾಡಿರುವ ಘಟನೆ ನಗರದ ಬಯಲು ಆಂಜನೇಯ ದೇವಾಲಯದಲ್ಲಿ ನಡೆದಿದೆ.

      ತುಮಕೂರಿನ ಹನುಮಂತಪುರದ ದೇವಾಲಯದಲ್ಲಿ ನಿನ್ನೆ(ಶುಕ್ರವಾರ) ತಡರಾತ್ರಿ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದು, ಹುಂಡಿ ಹೊಡೆದು ಹಣ ದೋಚಿ ಪರಾರಿಯಾಗಿದ್ದಾರೆ.

       ಇಂದು ಮುಂಜಾನೆ ಅಚ೯ಕರು ದೇವಾಲಯದ ಬಾಗಿಲು ತೆರದಾಗ ಘಟನೆ ಬೆಳಕಿಗೆ ಬಂದಿದ್ದು, ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

       ಇನ್ನು ಸ್ಥಳಕ್ಕೆ ಬೆರಳಚ್ಚು ಹಾಗೂ ಶ್ವಾನ ದಳದಿಂದ ಪರಿಶೀಲನೆ ನಡೆಯುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap