ತುಮಕೂರು ವಿವಿ ಕುಲಸಚಿವ ನಿಧನ

 

      ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಟಿ.ವಿ. ವೆಂಕಟೇಶ ರವರು ತೀವ್ರ ಹೃದಯಾಘಾತದಿಂದ ದಿನಾಂಕ 23.10.2018 ರಂದು ಬೆಳಿಗ್ಗೆ ದೈವಾಧೀನರಾಗಿದ್ದಾರೆ.

      ಇಂದು 7 ಗಂಟೆ ಸಮಯದಲ್ಲಿ ತುಮಕೂರು ನಗರದಲ್ಲಿ ವಾಯು ವಿಹಾರ ಮುಗಿಸಿ ಬಂದ ಅವರು ತಮ್ಮ ಕೋಣೆ ಪ್ರವೇಶಿಸುತ್ತಿದ್ದಂತೆ ಹೃದಯಾಘಾತಕ್ಕೆ ಒಳಗಾದರು. ತಕ್ಷಣ ವಿವಿ ಆವರಣದಲ್ಲಿ ವಾಯು ವಿಹಾರ ನಡೆಸುತ್ತಿದ್ದ ವೈದ್ಯರು ತಪಾಸಣೆ ನಡೆಸಿದ್ದಾರೆ. ಅದಾಗಲೇ ಮೈ ತಣ್ಣಗಿದ್ದ ಕಾರಣ ಸಮೀಪದ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಅದಾಗಲೇ ಪ್ರಾಣ ಪಕ್ಷಿ ಹಾರಿ ಹೋಗಿರುವುದಾಗಿ ಖಚಿತಪಡಿಸಿದರು. 

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link