ಗೋಡೆ ಕುಸಿತ : ಮಣ್ಣಿನಡಿ ಸಿಲುಕಿ ಇಬ್ಬರು ಕಾರ್ಮಿಕರ ದುರ್ಮರಣ!!

ಮಂಗಳೂರು:

      ನಿರ್ಮಾಣ ಹಂತದ ಕಟ್ಟಡದ ಪಕ್ಕದಲ್ಲಿದ್ದ ತಡೆಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ರಸ್ತೆ ಸಮೀಪ ನಡೆದಿದೆ. 

      ಪಶ್ಚಿಮ ಬಂಗಾಳ ಮೂಲದ ಮಸ್ರಿಕೂಲ್, ಬಾಗಲಕೋಟೆ ಮೂಲದ ಭೀಮೇಶ್ ಮೃತ ದುರ್ದೈವಿಗಳು. ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದ ಕಟ್ಟಡ ಸಮೀಪದಲ್ಲಿದ್ದ ಕಂಪೌಂಡ್ ಏಕಾಏಕಿ ಕುಸಿದಿದೆ.

      ನಾಲ್ವರು ಮಣ್ಣು ಕುಸಿತ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದ್ದು, ಮಣ್ಣು ಕುಸಿಯುತ್ತಿದ್ದಂತೆ ಇಬ್ಬರು ತಪ್ಪಿಸಿಕೊಂಡಿದ್ದಾರೆ. ಆದರೆ ಮತ್ತೆ ಇಬ್ಬರ ಮೇಲೆ ಒಂದೇ ಸಮನೆ ಮಣ್ಣು ಕುಸಿದಿದ್ದು, ಸ್ಥಳದಲ್ಲಿ ಸಾವನಪ್ಪಿದ್ದಾರೆ.

      ಮಣ್ಣಿನಡಿ ಇನ್ನಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ಇದ್ದು ಪಾಂಡೇಶ್ವರ ಹಾಗೂ ಕದ್ರಿ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಹಾರಕಾರ್ಯ ಕೈಗೊಂಡಿದ್ದಾರೆ.

      ಇನ್ನು ಗಾಯಾಳುಗಳನ್ನು ಯೇನಪೋಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap