ಮೈಸೂರು :

ಹಳೇ ವೈಶಮ್ಯದ ಹಿನ್ನೆಲೆಯಲ್ಲಿ ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮೈಸೂರಿನ ಎಲೆ ತೋಟದ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಗೌರಿಶಂಕರ್ ನಗರ ನಿವಾಸಿಗಳಾದ ಕಿರಣ್ (29) ಮತ್ತು ಕಿಶನ್ (29) ಬರ್ಬರವಾಗಿ ಕೊಲೆಯಾದವರು. ಈ ಘಟನೆಯಲ್ಲಿ ಮಧು ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ತಿ ವಿಚಾರ ಮತ್ತು ಹಳೇ ದ್ವೇಷದ ಹಿನ್ನಲೆಯಲ್ಲಿ ಸ್ನೇಹಿತರ ಮತ್ತೊಂದು ತಂಡವೇ ಕೊಲೆ ಮಾಡಿದೆ ಎಂದು ಶಂಕಿಸಲಾಗಿದೆ. ಕತ್ತುಕೊಯ್ದು ಕೊಲೆ ಮಾಡಲಾಗಿದ್ದು, ಸೋಮವಾರ ಮುಂಜಾನೆ ರಕ್ತಸಿಕ್ತ ಮೃತದೇಹಗಳನ್ನು ನೋಡಿ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಘಟನಾ ಸ್ಥಳಕ್ಕೆ ಡಿಸಿಪಿ ಡಾllಎ.ಎನ್. ಪ್ರಕಾಶ್ ಗೌಡ, ಎಸಿಪಿ ಪೂರ್ಣಚಂದ್ರ ಕೆ.ಆರ್. ಪೊಲೀಸ್ ಠಾಣೆ ಇನ್ಸ್ಪೆಕ್ಟರ್, ಶ್ವಾನದಳ, ಬೆರಳಚ್ಚು ತಂಡ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೃಷ್ಣ ರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








