ಉಡುಪಿ :
ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಷ್ಟ ಮಠಗಳಲ್ಲಿ ಒಂದಾದ ಉಡುಪಿಯ ಪೇಜಾವರ ಮಠದ 88 ವರ್ಷದ ವಿಶ್ವೇಶ ತೀರ್ಥ ಸ್ವಾಮೀಜಿ ಯವರು ನ್ಯೂಮೋನಿಯಾದಿಂದ ಬಳಲುತ್ತಿದ್ದರು. ಹೀಗಾಗಿ ವೆಂಟಿಲೇಟರ್ ಅನ್ನು ಅವರಿಗೆ ಅಳವಡಿಸಲಾಗಿದ್ದು, ಶ್ರೀಗಳಿಗೆ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾತ್ರಿ ಮಠದಲ್ಲಿದ್ದ ಶ್ರೀಗಳಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡ ತಕ್ಷಣ ಮಠದ ಸಿಬ್ಬಂದಿಗಳು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ಮಠದ ಮೂಲಗಳು ತಿಳಿಸಿವೆ. ಗುರುವಾರ ಬೆಳಗ್ಗೆ ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥಗೊಂಡಿದ್ದ ಶ್ರೀಗಳಿಗೆ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಅವರ ಆರೋಗ್ಯ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದ್ದು. ಅವರ ಆರೋಗ್ಯ ವೃದ್ಧಿಗೆ ಹರೇ ರಾಮ ಹರೇ ಕೃಷ್ಣ ಜಪ, ಪ್ರಾರ್ಥನೆ ಸಲ್ಲಿಸುವಂತೆ ಮಠವು ಮನವಿ ಮಾಡಿಕೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/12/Pejawar-Swamy-Faces-Criticism-for-Hosting-Iftar-Party-in-Mutt-e1545893208812.gif)