ಮಂಗಳೂರು:
ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವಸ್ಥಾನ ಹಾಗೂ ಮಠದ ನಡುವೆ ಕಿತ್ತಾಟ ನಡೆಯುತ್ತಿದ್ದು, ಈ ಸಂಬಂಧ ಮಠದ ಪರ ನಿಂತಿದ್ದ ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ಅರ್ಚಕ ಕುಮಾರ್ ಬನ್ನಿಂತಾಯ (61) ಅವರ ಮೇಲೆ ಹಲ್ಲೆ ನಡೆದಿದೆ. ಸರ್ಪ ಸಂಸ್ಕಾರ ಸೇವೆ ವಿಷಯಕ್ಕೆ ಮಠ ಮತ್ತು ದೇವಸ್ಥಾನದ ನಡುವೆ ಗಲಾಟೆ ನಡೆದಿತ್ತು. ಇದರಿಂದ ದೇವಸ್ಥಾನ ಹಾಗೂ ಮಠದ ಸಿಬ್ಬಂದಿ ನಡುವೆ ಕೂಡ ಭಿನ್ನಾಭಿಪ್ರಾಯ ಉಂಟಾಗಿತ್ತು. ಆದರೆ ಈ ಹಿನ್ನೆಲೆಯಲ್ಲಿ ದೇವಸ್ಥಾನದ ಅರ್ಚಕ ಮಠದ ಪರ ನಿಂತಿದ್ದರು. ಶನಿವಾರ ರಾತ್ರಿ ವೇಳೆ ದೇವಸ್ಥಾನದ ಹೊರಗೆ ಅರ್ಚಕ ನಿಂತಿದ್ದಾಗ ದುಷ್ಕರ್ಮಿಗಳು ಏಕಾಏಕಿ ಹಲ್ಲೆ ನಡೆಸಿದ್ದಾರೆ.
ಹಲ್ಲೆಯಿಂದ ಗಾಯಗೊಂಡ ಅರ್ಚಕರನ್ನು ಸ್ಥಳದಲ್ಲಿದ್ದವರು ಪುತ್ತೂರು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ದೇವಸ್ಥಾನದ ವಿರುದ್ಧ ನಿಂತು ಮಠಕ್ಕೆ ಬೆಂಬಲ ನೀಡಿದ್ದಕ್ಕೆ ಈ ರೀತಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
