ರಾಜ್ಯದಲ್ಲಿ ಜೂನ್.14ರ ನಂತರ 5 ಹಂತಗಳಲ್ಲಿ ʼಅನ್ ಲಾಕ್ʼ!!

ಬೆಂಗಳೂರು :  

      ಲಾಕ್ ಡೌನ್ ಏಕಾಏಕಿ ಸಡಿಲಗೊಳಿಸುವುದಿಲ್ಲ. ರಾಜ್ಯದಲ್ಲಿ 5 ಹಂತಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಜಾರಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

      ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಸಲು ತೀರ್ಮಾನಿಸಲಾಗಿದೆ. ಪಾಸಿಟಿವಿಟಿ ರೇಟ್ ಗಮನಿಸಿ ಅನ್ ಲಾಕ್ ಮಾಡಲಾಗುತ್ತದೆ ಎಂದರು.

      ಅಗತ್ಯ ವಸ್ತುಗಳ ಖರೀದಿಗೆ ನೀಡಲಾಗಿದ್ದ ಬೆಳಿಗ್ಗೆ 6ರಿಂದ 10ಗಂಟೆವರೆಗಿನ ಅವಕಾಶವನ್ನು 12 ಗಂಟೆವರೆಗೆ ವಿಸ್ತರಿಸಲು ಹಾಗೂ ಪಾರ್ಕ್ ಗಳಲ್ಲಿ ವಾಕಿಂಗ್ ಮಾಡಲು ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ.

      ಇನ್ನೂ ಪಾರ್ಕ್ ಗಳಲ್ಲಿ ವಾಕಿಂಗ್ ಮಾಡೋದಕ್ಕೆ ಅವಕಾಶ ನೀಡಬಹುದು ಎಂಬುದಾಗಿ ತಜ್ಞರು ಸೂಚಿಸಿದ್ದಾರೆ. ಹೀಗಾಗಿ ಅನ್ ಲಾಕ್ ಮೊದಲ ಹಂತದಲ್ಲಿಯೇ ಪಾರ್ಕ್ ನಲ್ಲಿ ವಾಕಿಂಗ್ ಮಾಡೋದಕ್ಕೂ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಅಂತಿಮವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap