ಬೆಂಗಳೂರು :
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಭ್ಯರ್ಥಿಯಾಗಿ ವಾಟಾಳ್ ನಾಗರಾಜ್ ಸ್ಪರ್ಧಿಸಲಿದ್ದಾರೆ.
ಇಂದು ಬಿಬಿಎಂಪಿ ದಕ್ಷಿಣ ವಲಯ ಕಚೇರಿಗೆ ತಾಳಮೇಳಗಳೊಂದಿಗೆ ಜಟಕಾ ಗಾಡಿಯಲ್ಲಿ ಬಂದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಲೋಕಸಭೆಯಲ್ಲಿ ಕನ್ನಡದ ಪರ ಧ್ವನಿ ಎತ್ತುವ ಒಬ್ಬರೂ ಸಂಸದರಿಲ್ಲ. ಸಂಸದನಾಗಿ ಕೆಂಪುಕೋಟೆ ಮೇಲೆ ಕನ್ನಡದ ಧ್ವಜ ಹಾರಿಸೋಕೆ ಹೋರಾಟ ಮಾಡುತ್ತೇನೆ. ಹೀಗಾಗಿ ಕನ್ನಡದ ಅಭ್ಯರ್ಥಿಯಾಗಿ ನಾನು ಕಣಕ್ಕೆ ಇಳಿದಿದ್ದೇನೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
