ರಾಮನಗರ:
ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ಕೂಡಲೆ ಪರಿಹಾರ ಘೋಷಣೆ ಮಾಡಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಬೇಕೆಂದು ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದರು.
ರಾಮನಗರದ ಬಿಎಂ ರಸ್ತೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರ ಉದಾಸೀನ ಮಾಡುತ್ತಿದೆ. ಇಲ್ಲಿಂದ ಆಯ್ಕೆಯಾದ ಸಂಸದರು ರಾಜ್ಯದ ಸಮಸ್ಯೆಗಳನ್ನು ಕೇಂದ್ರದ ಗಮನಕ್ಕೆ ತರುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೇಕೆದಾಟು ಯೋಜನೆಯನ್ನು ಕೂಡಲೆ ಕೈಗೆತ್ತಿಕೊಳ್ಳಬೇಕು ಹಾಗು ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪೀಡಿತರಿಗೆ ತಕ್ಷಣ ಕೇಂದ್ರ 50 ಸಾವಿರ ಕೋಟಿ ಪರಿಹಾರ ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರಕ್ಕೆ ಮೂರು ಜನ ಉಪ ಮುಖ್ಯಮಂತ್ರಿಗಳನ್ನು ಮಾಡಿರುವುದನ್ನು ಬಿಜೆಪಿ ಕೂಡಲೆ ಹಿಂದಕ್ಕೆ ಪಡೆಯಬೇಕು. ಪ್ರವಾಹದಿಂದ ಮೃತಪಟ್ಟ ಕುಟುಂಬಗಳಿಗೆ 25 ಲಕ್ಷ ಪರಿಹಾರ ಬಿಡುಗಡೆ ಮಾಡಬೇಕೆಂದು ಅವರು ಒತ್ತಾಯಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/08/vatal-nagaraaaj.gif)