ಬೆಂಗಳೂರು :
ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ಬೆಂಗಳೂರಿನಲ್ಲಿ ವಿಧಾನ ಮಂಡಲ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ನೂತನ ಸಚಿವರಿಗೆ ಖಾತೆ ಹಂಚಿಕೆಯಾದ ಬಳಿಕ ಗುರುವಾರ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯಿತು. ಈ ವೇಳೆ ವಿಧಾನ ಮಂಡಲ ಅಧಿವೇಶನ ದಿನಾಂಕ ನಿಗದಿ ಮಾಡಲಾಯಿತು.
ಶೀಘ್ರ ವಿಧಾನಮಂಡಲ ಅಧಿವೇಶನ ಕರೆಯಲು ವಿಪಕ್ಷಗಳು ಒತ್ತಡ ಹೇರಿದ್ದವು. ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಸಬೇಕೆಂದು ಕೂಗು ಕೇಳಿಬಂದಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/08/Vidhana-mandal-soudha.jpg)