ಬೆಳಗಾವಿ: ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಕಿತ್ತೂರು ತಾಲ್ಲೂಕಿನ ದಾಸ್ತಿಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಈ ಖಾಸಗಿ ವೋಲ್ವೋ ಬಸ್ ಬೆಂಗಳೂರಿನಿಂದ ರಾಜಸ್ಥಾನಕ್ಕೆ ಹೊರಟಿತ್ತು. ಕಿತ್ತೂರು ತಾಲೂಕಿನ ದಾಸ್ತಿಕೊಪ್ಪ ಬಳಿ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ತಕ್ಷಣ ಅಂಬ್ಯುಲೆನ್ಸ್ ಗೆ ಕರೆ ಮಾಡಿ, ಘಟನೆಯಲ್ಲಿ ಗಾಯಗೊಂಡ 20 ಕ್ಕೂ ಹೆಚ್ಚು ಮಂಡಿಯನ್ನು ಕೂಡಲೇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಬಸ್ಸಿನಲ್ಲಿ ಒಟ್ಟು 34 ಮಂದಿ ಪ್ರಯಾಣಿಸುತ್ತಿದ್ದರು. ಸದ್ಯಕ್ಕೆ ಪ್ರಯಾಣಿಕರೆಲ್ಲರೂ ಪ್ರಾಣಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದ ಬಳಿಕ ಘಟನಾ ಸ್ಥಳಕ್ಕೆ ಎಂ.ಕೆ.ಹುಬ್ಬಳ್ಳಿ ಉಪಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.