ಹಾಸನ :
ವೈನ್ ಶಾಪ್ನ ರೋಲಿಂಗ್ ಶೆಟರ್ ಮುರಿದು ದುಬಾರಿ ಮೌಲ್ಯದ ಮದ್ಯದ ಬಾಟಲ್ ಗಳನ್ನು ಕದ್ದು ಪರಾರಿಯಾಗಿರುವ ಘಟನೆ ಹಾಸನ ಹೊರವಲಯದ NH-75 ರಸ್ತೆಗೆ ಹೊಂದಿಕೊಂಡಂತೆ ಧನಲಕ್ಷ್ಮಿ ವೈನ್ಸ್
ಲಾಕ್ಡೌನ್ ಪರಿಣಾಮ ಎಲ್ಲಾ ಮದ್ಯದಂಗಡಿಗಳು ಬಂದ್ ಆಗಿವೆ. ಜಿಲ್ಲೆಯಲ್ಲಿ ಮದ್ಯದಂಗಡಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಹಾಸನ ನಗರ ಹೊರ ವಲಯದಲ್ಲಿರುವ ಬೂವನಹಳ್ಳಿ ಪಕ್ಕ ಇರೋ ಧನಲಕ್ಷ್ಮಿ ವೈನ್ ಶಾಪ್ನ ರೋಲಿಂಗ್ ಶೆಟರ್ ಮುರಿದು ಒಳ್ಳನುಗ್ಗಿದ ಕಳ್ಳರು, ದುಬಾರಿ ಮೌಲ್ಯದ ಮದ್ಯದ ಬಾಟಲ್ ಗಳನ್ನು ಕದ್ದು ಪರಾರಿಯಾಗಿದ್ದಾರೆ.
ಅಬಕಾರಿ ಇಲಾಖೆ ಪೊಲೀಸ್ ಇಲಾಖೆ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಸಹ ಮದ್ಯದ ಅಂಗಡಿಗಳ ಕಳ್ಳತನ ಪ್ರಕರಣಗಳು ಪದೇ ಪದೇ ವರದಿಯಾಗುತ್ತಲೇ ಇದೆ.
ಘಟನಾ ಸ್ಥಳಕ್ಕೆ ಹಾಸನ ಬಡಾವಣೆ ಠಾಣೆ ಪೊಲೀಸರು ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/Wine-shop.gif)