ಬೆಂಗಳೂರು:
ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಹಾನಿಯಾಗಿದೆ. ಇಲ್ಲಿನ ಪರಿಸ್ಥಿತಿಯಲ್ಲಿ ಅಧಿವೇಶನ ನಡೆಸುವುದು ಸಾಧ್ಯವಾಗುವುದಿಲ್ಲ. ಬೆಳಗಾವಿಯ ಬದಲು ಬೆಂಗಳೂರಿನಲ್ಲಿ ಅಕ್ಟೋಬರ್ 14 ರಿಂದ 21 ರವರೆಗೆ ಬೆಂಗಳೂರಿನಲ್ಲಿ ವಿಧಾನಮಂಡಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಬೆಳಗಾವಿ ಜಿಲ್ಲೆ ಪ್ರವಾಹ ಪೀಡಿತವಾಗಿದ್ದು, ಅಲ್ಲಿ ಅಧಿವೇಶನ ನಡೆಸಲು ಆಡಳಿತ ಯಂತ್ರ ಅಲ್ಲಿಗೆ ವರ್ಗಾವಣೆಯಾದರೆ ಪರಿಹಾರ ಕಾರ್ಯಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿ ಅಧಿವೇಶನ ನಡೆಸಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/07/belagavi-suvarna-soudha-.jpg)