ಬಳ್ಳಾರಿ:
ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ನಮ್ಮ ಜಿಲ್ಲೆಗೆ ಬರುವವರಿಗೆ ಪಾಸ್ ಕಡ್ಡಾಯ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ಕೋವಿಡ-19 ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಲ್ಲದೇ ಹೆಚ್ಚಿನ ಪ್ರಕರಣಗಳು ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ವಿಮ್ಸ ಆಸ್ಪತ್ರೆಗೆ ಬರುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಇಂದಿನಿಂದ ಇ-ಪಾಸ್ ಸೇವಾ ಸಿಂಧುವಿನಲ್ಲಿ ನೋಂದಣಿ ಮತ್ತು ಜಿಲ್ಲಾಡಳಿತ ನೀಡುವ ಪಾಸ್ ಗಳಿಲ್ಲದೇ ನಮ್ಮ ಜಿಲ್ಲೆಗೆ ಪ್ರವೇಶ ನೀಡುವುದಿಲ್ಲ ಎಂದು ಈ ಆದೇಶ ಸರಕು ಸಾಗಾಣೆ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.
ಅಲ್ಲದೇ, ಆಂಧ್ರಪ್ರದೇಶದಿಂದ ಬರುವ ಬಸ್ ಗಳಲ್ಲಿ ಸೇವಾ ಸಿಂಧು ನೋಂದಣಿ ಮಾಡಿರುವವರನ್ನು ಮಾತ್ರ ಕರೆತರಲು ಸೂಚಿಸಿದೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/07/Bellary.jpg)